Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...