Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...