Homeಕರ್ನಾಟಕ40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

- Advertisement -
- Advertisement -

“ಸಂತೋಷ್‌ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರು ಮಾತುಕತೆ ನಡೆಸಿದ್ದನ್ನು ಒಂದು ಸಲ ನೋಡಿದ್ದೆ. ಅದು ಡೆಲ್ಲಿಯಲ್ಲಿ ಆದದ್ದು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

‘ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪನವರೇ ಕಾರಣ’ ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶೇ. 40ರಷ್ಟು ಕಮಿಷನ್‌ಗಾಗಿ ಪೀಡಿಸುತ್ತಿದ್ದಾರೆಂದು ಆರೋಪಿಸಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳೊಂದಿಗೆ ಮಾತನಾಡಿರುವ ಈಶ್ವರಪ್ಪ, “ನನ್ನನ್ನು ಎಂಬತ್ತು ಸಲ ಭೇಟಿಯಾಗಿರುವುದಾಗಿ ಸಂತೋಷ್ ಪಾಟೀಲ್‌ ಹೇಳಿಕೊಂಡಿದ್ದಾರೆ. ಅವರು ಯಾರೆಂಬುದೇ ನನಗೆ ಗೊತ್ತೇ ಇಲ್ಲ. ಟಿವಿ 18ನಲ್ಲಿ ಮಾತನಾಡಿದ್ದು ನೋಡಿದ್ದೆ. ನಾಲ್ಕು ಕೋಟಿ ರೂ. ಕೆಲಸ ಮಾಡಿದ್ದೀನಿ, 40 ಪರ್ಸೆಂಟ್‌ ಕಮಿಷನ್‌ ಕೇಳುತ್ತಿದ್ದಾರೆಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

‘‘ಈಶ್ವರಪ್ಪನವರ ಕಡೆಯವರು ನನ್ನಿಂದ 40 ಪರ್ಸೆಂಟ್‌ ಕಮಿಷನ್‌ ಕೇಳಿದ್ದಾರೆ. ಇದನ್ನು ಮೋದಿಯವರಿಗೆ, ಅಮಿತ್‌ ಶಾ ಅವರಿಗೆ ತಿಳಿಸಿದ್ದೇನೆ ಎಂದು ಸಂತೋಷ್‌ ಹೇಳಿರುವುದನ್ನು ಟಿವಿಯಲ್ಲಿ ನೋಡಿದೆ. ಆ ಕಾಪಿ ನನಗೆ ಸಿಕ್ಕಿತು. ಬಳಿಕ ಕೇಸ್ ಹಾಕಿದ್ದೇನೆ. ಸಂತೋಷ್‌ ಪಾಟೀಲ್‌ಗೆ ನೋಟೀಸ್ ಹೋಗಿದೆ. ಈ ಮಧ್ಯೆ ಕೇಂದ್ರದ ಕಾಂಗ್ರೆಸ್ ನಾಯಕರಾದ ಡಿ.ಕೆ.ಸುರೇಶ್‌, ಎಲ್‌.ಹನುಮಂತಯ್ಯನವರು ದೆಹಲಿಯಲ್ಲಿ ಪ್ರೆಸ್‌ಮೀಟ್‌ ಮಾಡಿ ಕಮಿಷನ್ ಆರೋಪ ಮಾಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವಿ ಮಾಡುತ್ತಿರುವ ಸಂತೋಷ ಪಾಟೀಲ್‌

ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್‌ ಸಿಂಗ್ ಅವರ ಕಚೇರಿಯಿಂದ ನಮ್ಮ ಕಚೇರಿಗೆ ಒಂದು ಪತ್ರ ಬಂದಿದೆ. ಕಮಿಷನ್‌ ಆರೋಪದ ಬಗ್ಗೆ ಕ್ಲಾರಿಫಿಕೇಷನ್‌ ಕೇಳಿದ್ದಾರೆ. ನನಗೆ ಅದೂ ಗೊತ್ತಿಲ್ಲ. ಉತ್ತರ ಹೋದ ಮೇಲೆ ಪ್ರತಿ ನನಗೆ ಸಿಕ್ಕಿತು ಎಂದಿದ್ದಾರೆ.

ಮತ್ತೊಂದು ಮಾಧ್ಯಮದೊಂದಿಗೆ ಮಾತನಾಡುತ್ತಾ, ‘ಸಂತೋಷ್‌ ಪಾಟೀಲ್‌ 108 ಕಾಮಗಾರಿ ಮಾಡಿರುವುದಾಗಿ ಹೇಳುತ್ತಿದ್ದಾರೆ. ನಾವು ಯಾವುದೇ ಕೆಲಸವನ್ನು ಅವರಿಗೆ ಕೊಟ್ಟಿಲ್ಲ. ದುಡ್ಡು ಕೊಡುವ ಪ್ರಶ್ನೆಯೇ ಬರುವುದಿಲ್ಲ. ಇದೆಲ್ಲವನ್ನು ಇಟ್ಟುಕೊಂಡು ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದೀನಿ’ ಎಂದಿದ್ದಾರೆ.

“ಸಂತೋಷ್ ಪಾಟೀಲ್‌ ಅವರಿಗೆ ನೋಟೀಸ್ ಹೋಗಿದೆ. ಸುದ್ದಿ ಪ್ರಸಾರ ಮಾಡಿದ ಟಿ.ವಿ. 18 ಅವರಿಗೂ ನೋಟೀಸ್ ಹೋಗಿದೆ. ಇದರ ಮಧ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದು ತಕ್ಷಣವೇ ಈ ಕುರಿತು ತನಿಖೆ ಮಾಡಬೇಕು ಎಂದಿದ್ದೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ನೋಡಿರಿ: ವಿಡಿಯೊ ➤➤ ‘ಮುಂದಿನ ಅನಾಹುತಕ್ಕೆ ಈಶ್ವರಪ್ಪನವರೇ ಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....