Homeಕರ್ನಾಟಕ40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

- Advertisement -
- Advertisement -

“ಸಂತೋಷ್‌ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರು ಮಾತುಕತೆ ನಡೆಸಿದ್ದನ್ನು ಒಂದು ಸಲ ನೋಡಿದ್ದೆ. ಅದು ಡೆಲ್ಲಿಯಲ್ಲಿ ಆದದ್ದು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

‘ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪನವರೇ ಕಾರಣ’ ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶೇ. 40ರಷ್ಟು ಕಮಿಷನ್‌ಗಾಗಿ ಪೀಡಿಸುತ್ತಿದ್ದಾರೆಂದು ಆರೋಪಿಸಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳೊಂದಿಗೆ ಮಾತನಾಡಿರುವ ಈಶ್ವರಪ್ಪ, “ನನ್ನನ್ನು ಎಂಬತ್ತು ಸಲ ಭೇಟಿಯಾಗಿರುವುದಾಗಿ ಸಂತೋಷ್ ಪಾಟೀಲ್‌ ಹೇಳಿಕೊಂಡಿದ್ದಾರೆ. ಅವರು ಯಾರೆಂಬುದೇ ನನಗೆ ಗೊತ್ತೇ ಇಲ್ಲ. ಟಿವಿ 18ನಲ್ಲಿ ಮಾತನಾಡಿದ್ದು ನೋಡಿದ್ದೆ. ನಾಲ್ಕು ಕೋಟಿ ರೂ. ಕೆಲಸ ಮಾಡಿದ್ದೀನಿ, 40 ಪರ್ಸೆಂಟ್‌ ಕಮಿಷನ್‌ ಕೇಳುತ್ತಿದ್ದಾರೆಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

‘‘ಈಶ್ವರಪ್ಪನವರ ಕಡೆಯವರು ನನ್ನಿಂದ 40 ಪರ್ಸೆಂಟ್‌ ಕಮಿಷನ್‌ ಕೇಳಿದ್ದಾರೆ. ಇದನ್ನು ಮೋದಿಯವರಿಗೆ, ಅಮಿತ್‌ ಶಾ ಅವರಿಗೆ ತಿಳಿಸಿದ್ದೇನೆ ಎಂದು ಸಂತೋಷ್‌ ಹೇಳಿರುವುದನ್ನು ಟಿವಿಯಲ್ಲಿ ನೋಡಿದೆ. ಆ ಕಾಪಿ ನನಗೆ ಸಿಕ್ಕಿತು. ಬಳಿಕ ಕೇಸ್ ಹಾಕಿದ್ದೇನೆ. ಸಂತೋಷ್‌ ಪಾಟೀಲ್‌ಗೆ ನೋಟೀಸ್ ಹೋಗಿದೆ. ಈ ಮಧ್ಯೆ ಕೇಂದ್ರದ ಕಾಂಗ್ರೆಸ್ ನಾಯಕರಾದ ಡಿ.ಕೆ.ಸುರೇಶ್‌, ಎಲ್‌.ಹನುಮಂತಯ್ಯನವರು ದೆಹಲಿಯಲ್ಲಿ ಪ್ರೆಸ್‌ಮೀಟ್‌ ಮಾಡಿ ಕಮಿಷನ್ ಆರೋಪ ಮಾಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವಿ ಮಾಡುತ್ತಿರುವ ಸಂತೋಷ ಪಾಟೀಲ್‌

ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್‌ ಸಿಂಗ್ ಅವರ ಕಚೇರಿಯಿಂದ ನಮ್ಮ ಕಚೇರಿಗೆ ಒಂದು ಪತ್ರ ಬಂದಿದೆ. ಕಮಿಷನ್‌ ಆರೋಪದ ಬಗ್ಗೆ ಕ್ಲಾರಿಫಿಕೇಷನ್‌ ಕೇಳಿದ್ದಾರೆ. ನನಗೆ ಅದೂ ಗೊತ್ತಿಲ್ಲ. ಉತ್ತರ ಹೋದ ಮೇಲೆ ಪ್ರತಿ ನನಗೆ ಸಿಕ್ಕಿತು ಎಂದಿದ್ದಾರೆ.

ಮತ್ತೊಂದು ಮಾಧ್ಯಮದೊಂದಿಗೆ ಮಾತನಾಡುತ್ತಾ, ‘ಸಂತೋಷ್‌ ಪಾಟೀಲ್‌ 108 ಕಾಮಗಾರಿ ಮಾಡಿರುವುದಾಗಿ ಹೇಳುತ್ತಿದ್ದಾರೆ. ನಾವು ಯಾವುದೇ ಕೆಲಸವನ್ನು ಅವರಿಗೆ ಕೊಟ್ಟಿಲ್ಲ. ದುಡ್ಡು ಕೊಡುವ ಪ್ರಶ್ನೆಯೇ ಬರುವುದಿಲ್ಲ. ಇದೆಲ್ಲವನ್ನು ಇಟ್ಟುಕೊಂಡು ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದೀನಿ’ ಎಂದಿದ್ದಾರೆ.

“ಸಂತೋಷ್ ಪಾಟೀಲ್‌ ಅವರಿಗೆ ನೋಟೀಸ್ ಹೋಗಿದೆ. ಸುದ್ದಿ ಪ್ರಸಾರ ಮಾಡಿದ ಟಿ.ವಿ. 18 ಅವರಿಗೂ ನೋಟೀಸ್ ಹೋಗಿದೆ. ಇದರ ಮಧ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದು ತಕ್ಷಣವೇ ಈ ಕುರಿತು ತನಿಖೆ ಮಾಡಬೇಕು ಎಂದಿದ್ದೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ನೋಡಿರಿ: ವಿಡಿಯೊ ➤➤ ‘ಮುಂದಿನ ಅನಾಹುತಕ್ಕೆ ಈಶ್ವರಪ್ಪನವರೇ ಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....