Homeಚಳವಳಿನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದರು.

- Advertisement -
- Advertisement -

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರು ಅಂಬಾನಿ-ಅದಾನಿ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ನೀಡಿದ ಕರೆ ಓಗೊಟ್ಟಿರುವ ರಾಜ್ಯದ ಯುವಜನರು ತಮ್ಮ ಹೋರಾಟವನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಹೊಯ್ದಿದ್ದು, ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಿದ್ದೇವೆ 4G ಸೇವೆ ಕೊಡಿ ಎಂದು ಒತ್ತಾಯಿಸುತ್ತಿದ್ದಾರೆ.

ಇಂದು ಬೆಂಗಳೂರು, ಗಂಗಾವತಿ ಮತ್ತು ಕಲಬುರಗಿಯಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಹಲವು ವಿದ್ಯಾರ್ಥಿ -ಯು ವಜನರು BSNL ಕಚೇರಿಗಳಿಗೆ ಹೋಗಿ ಲಕ್ಷಾಂತರು ಜನರು BSNL ಸಿಮ್‌ಗೆ ಪೋರ್ಟ್ ಆಗಲು ಸಿದ್ದರಿದ್ದು, ಅದಕ್ಕೆ ನೀವು 4G ಸೇವೆ ಕೊಡಿ ಎಂದು ಆಗ್ರಹಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದರು. ರೈತರ ಹೋರಾಟ ಬೆಂಬಲಿಸಿ ಡಿಸೆಂಬರ್ 10 ರಂದು ನೂರಾರು ಯುವಜನರು ತಮ್ಮ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು.

ಈ ಆಂದೋಲನದ ನೇತೃತ್ವ ವಹಿಸಿರುವ ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ನಾನುಗೌರಿ.ಕಾಂ ಜೊತೆ ಮಾತನಾಡಿ “ಇದೀಗ 5ಜಿ ತರಂಗಗಳನ್ನು ಜಿಯೋ ಕಂಪನಿಗೇ ಮೊದಲು ನೀಡುವ ಸುದ್ಧಿ ನಮಗೆ ಆಘಾತ ನೀಡಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆ ಬಲಗೊಳ್ಳದೇ ಖಾಸಗೀ ವ್ಯಕ್ತಿಯ ಲಾಭಕ್ಕಾಗಿನ ವ್ಯವಸ್ಥೆ ಅಪಾಯಕಾರಿಯಾಗಿದೆ. ಹಾಗಾಗಿ ನಿಮ್ಮ ವ್ಯಾಪ್ತಿಯಲ್ಲಿ ಬರುವ ನಗರ-ಹಳ್ಳಿಗಳಲ್ಲಿಯಾದರೂ ಬಿಎಸ್‌ಎನ್‌ಎಲ್ ತರಂಗಗಳನ್ನು ಉತ್ತಮಗೊಳಿಸಿದರೆ ದೇಶಪ್ರೇಮಿ ವಿದ್ಯಾರ್ಥಿ-ಯುವಜನರಾದ ನಾವು ಬಿಎಸ್‌ಎನ್‌ಎಲ್ ಸೇವೆಯನ್ನು ಬಳಸಲು ಸಿದ್ಧರಿದ್ದೇವೆ. ನೂರಾರು ಯುವಜನರನ್ನು ಬಿಎಸ್‌ಎನ್‌ಎಲ್ ಗೆ ಪೋರ್ಟ್ ಮಾಡಿಸುವ ಆಂದೋಲನವನ್ನು ಮಾಡಲು ತಯಾರಿದ್ದೇವೆ ಮತ್ತು ರಾಜ್ಯದಾದ್ಯಂತ ಈ ಆಂದೋಲನ ನಡೆಯಲಿದೆ. ಇದನ್ನು ತಾವುಗಳು ಗಂಭೀರವಾಗಿ ಪರಿಗಣಿಸಿ ತರಂಗಗಳನ್ನು ಬಲಪಡಿಸುವ ಎಲ್ಲಾ ಪ್ರಯತ್ನಗಳನ್ನು ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿನ ಬಿಎಸ್‌ಎನ್‌ ಕಚೇರಿಗಳಿಗೆ ಕರ್ನಾಟಕ ಶ್ರಮಿಕ ಶಕ್ತಿಯ ವರದರಾಜೇಂದ್ರ, ಕೆವಿಎಸ್‌ನ ಮಮತಾ, ಮನೋಜ್ ಮುಂತಾದವರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಗಂಗಾವತಿ ತಂಡದಲ್ಲಿ ಸಂತೋಷ್ ಎಚ್.ಎಂ, ದುರ್ಗೇಶ್, ಸುನೀಲ್ ಮುಂತಾದವರಿದ್ದಾರೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...