Homeಕರ್ನಾಟಕನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

- Advertisement -
- Advertisement -

ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಿಲ್ಲಾ ನ್ಯಾಷನಲ್ ಸ್ಟೂಡೆಂಟ್ಸ್‌ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯು‌ಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನೆಹರು ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನಲೆಯಲ್ಲಿ ನೆಹರು ಕ್ರೀಡಾಂಗಣದ ಬಳಿ ಎನ್‌ಎಸ್‌ಯು‌ಐ ಕಾರ್ಯಕರ್ತರು ಗೋ ಬ್ಯಾಕ್ ಸೂಲಿಬೆಲೆ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಲ್ಲದೆ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣದ ವೇಳೆ ಹಲವು ಸುಳ್ಳುಗಳನ್ನು ಹೇಳಿ, ಯುವ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ಆದ್ದರಿಂದ ಅವರ ಭಾಷಣಕ್ಕೆ ಅವಕಾಶ ನೀಡಬಾರದು ಎಂದು ಕಾರ್ಯಕರ್ತರು ಆಗ್ರಹಿಸಿದರು.

ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡುವುದಾಗಿ ಇಲಾಖೆ ತಿಳಿಸಿತ್ತು. ಇತ್ತೀಚೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಬೇಕಿದ್ದ ರೈತ ಪಂಚಾಯಿತಿಗೆ ಅವಕಾಶ ನೀಡಿರಲಿಲ್ಲ, ಆದರೆ ಒಂದು ರಾಷ್ಟ್ರ ಒಂದು ಕಾನೂನು ಕಾರ್ಯಕ್ರಮಕ್ಕೆ ಕ್ರೀಂಡಾಗಣವನ್ನು ಹೇಗೆ ನೀಡಲಾಗಿದೆ ಎಂದು ಸಂಘಟನೆ ಪ್ರಶ್ನಿಸಿದೆ.

ನಿಮ್ಮ ಸುಳ್ಳು ನಮಗೆ ಬೇಕಾಗಿಲ್ಲ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ಮಾ.27 ಕ್ಕೆ ನರೇಂದ್ರ ಮೋದಿ ವಿಚಾರ ಮಂಚ್‌ನಿಂದ ಆಯೋಜಿಸಿರುವ ರಾಜಕೀಯ ಪ್ರೇರಿತ ಭಾಷಣದ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಚಕ್ರವರ್ತಿ ಸೂಲಿಬೆಲೆ ಅವರ ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವುದು ಖಂಡನೀಯ ಎಂದು ಸಂಘಟನೆ ಆರೋಪಿಸಿದೆ.

“ಸೂಲಿಬೆಲೆ ಅವರು ಭಾಷಣದಲ್ಲಿ ಸುಳ್ಳುಗಳನ್ನು ಹೇಳುವ ಮೂಲಕ ಯುವಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡಿಸೇಲ್ ದರ ಕಡಿಮೆ ಆಗುತ್ತದೆ. ಯುವಜನರಿಗೆ ಉದ್ಯೋಗ ಸಿಗುತ್ತದೆ. ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತದೆ ಎಂದೆಲ್ಲಾ ಸುಳ್ಳು ಹೇಳಿಕೆಗಳನ್ನು ಹಿಂದಿನ ಭಾಷಣಗಳಲ್ಲಿ ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರದ ನರೇಂದ್ರ ಮೋದಿ ಅಧಿಕಾರ ಅವಧಿಯಲ್ಲಿ ಯುವಜನರಿಗೆ ಸರಿಯಾದ ರೀತಿಯಲ್ಲಿ ಉದ್ಯೋಗ ಸಿಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇಂತಹ ಸುಳ್ಳು ಭಾಷಣ ಮಾಡುವವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಸಂಘಟನೆ ಒತ್ತಾಯಿಸಿದೆ.

ನೆಹರು ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಎನ್‌ಎಸ್‌ಯು‌ಐ ಮುಖಂಡರಾದ ಚೇತನ್ ಗೌಡ, ಬಾಲಾಜಿ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...