Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...