Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...