Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...