Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....