Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...