Homeಅಂತರಾಷ್ಟ್ರೀಯಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪರಿಸರ ಜಾಗೃತಿ ಭಾಷಣ ಮಾಡಿ ವಿಶ್ವದ ಗಮನ ಸೆಳೆದ 16ರ ಪೋರಿ, ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ಬೇಡಿಕೆಗಳನ್ನು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಟೀಕಿಸಿದ್ದಾರೆ.

ಮಾಸ್ಕೋದಲ್ಲಿ ನಡೆದ ಇಂಧನ ಸಮಾವೇಶದಲ್ಲಿ ಮಾತನಾಡಿದ ವ್ಲಾಡಿಮರ್ ಪುಟಿನ್, ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಬಾಲಕಿ ಗ್ರೇಟಾ ಅವಾಸ್ತವಿಕ ಬೇಡಿಕೆಗಳನ್ನು ಮಂಡಿಸಿದ್ದಾರೆ. ಗ್ರೇಟಾ ಭಾಷಣ ಸಾಕಷ್ಟು ನಿರಾಸೆ ಮೂಡಿಸಿತು. ಭಾಷಣದ ಬಗ್ಗೆ ಯಾವುದೇ ಉತ್ಪ್ರೇಕ್ಷೆ ಮಾಡಬಾರದು ಎಂದರು.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

“ಆಧುನಿಕ ಜಗತ್ತು ಸಂಕೀರ್ಣ ಮತ್ತು ವಿಭಿನ್ನವಾಗಿದೆ ಎಂದು ಯಾರೂ ಗ್ರೇಟಾಗೆ ವಿವರಿಸಿಲ್ಲ. ಆಫ್ರಿಕಾದಲ್ಲಿ ಅಥವಾ ಏಷ್ಯಾದ ಅನೇಕ ದೇಶಗಳಲ್ಲಿನ ಜನರು ಸ್ವೀಡನ್‌ನಂತೆಯೇ ಅದೇ ಸಂಪತ್ತಿನ ಮಟ್ಟದಲ್ಲಿ ಬದುಕಲು ಬಯಸುತ್ತಾರೆ.” ಎಂದು ಪುಟಿನ್ ಹೇಳಿದ್ದಾರೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಗ್ರೇಟಾ ಪರಿಸರ ಜಾಗೃತಿ ಪಾಠ ಮಾಡಲಿ. ಅವರು ಬಡತನದಲ್ಲಯೇ ಮುಂದುವರೆಯಬೇಕು ಮತ್ತು ಸ್ವೀಡನ್‌ನಂತ ಆಗಬಾರದೆಂದು ಆಕೆ ಹೇಳಬೇಕಿದೆ. ಬಾಲಕಿಯನ್ನು ಕೆಲ ಗುಂಪುಗಳು ತಮ್ಮ ಸ್ವಾರ್ಥ ಗುರಿ ಸಾಧನೆಗೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದ ಅವರು ಆ ಗುಂಪುಗಳ ಹೆಸರನ್ನು ಉಲ್ಲೇಖಿಸಲಿಲ್ಲ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಥನ್ಬರ್ಗ್ ಸಹ ಗ್ರೇಟಾಳನ್ನು ಅಪಹಾಸ್ಯ ಮಾಡಿದ್ದರು. ಕೆನಡಾದ ಸಂಸತ್ ಸದಸ್ಯ ಮ್ಯಾಕ್ಸಿಮ್ ಬರ್ನಿಯರ್ ಒಂದು ಹೆಜ್ಜೆ ಮುಂದೆ ಹೋಗಿ ಆಕೆ ಅಲಾರಮಿಸ್ಟ್ ಮತ್ತು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟೀಕಿಸಿದ್ದರು. “ನಮ್ಮ ಹಕ್ಕೊತ್ತಾಯಗಳನ್ನು ನಿಭಾಯಿಸಲು ಸಾಧ್ಯವಾಗದವರು ಮಾತ್ರ ಮಕ್ಕಳ ಅಪಹಾಸ್ಯ ಮಾಡುತ್ತಾರೆ” ಎಂದು ಥನ್ಬರ್ಗ್ ಪ್ರತಿಕ್ರಿಯೆ ನೀಡಿದ್ದರು.

ಒಂದು ವರ್ಷದ ಹಿಂದೆ ಸ್ವೀಡಿಷ್ ಸಂಸತ್ತಿನ ಹೊರಗೆ ಥನ್‌ಬರ್ಗ್‌ರ ಏಕಾಂತ ಪ್ರತಿಭಟನೆಯಿಂದ ಪ್ರೇರಿತರಾಗಿ, ಹವಾಮಾನ ವೈಪರೀತ್ಯದ ಬಗ್ಗೆ ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ಜನರು ಜಗತ್ತಿನಾದ್ಯಂತ ಇಂದು ಬೀದಿಗಿಳಿದಿದ್ದಾರೆ.

“ನೀವು ನನ್ನ ಕನಸುಗಳನ್ನು ಮತ್ತು ನನ್ನ ಬಾಲ್ಯವನ್ನು ನಿಮ್ಮ ಖಾಲಿ ಮಾತುಗಳಿಂದ ಕದ್ದಿದ್ದೀರಿ” ಎಂದು ಗ್ರೇಟಾ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದರು.

ಈ ವಾರದ ಆರಂಭದಲ್ಲಿ, ರಷ್ಯಾದ ಸಂಸತ್ತಿನ ಸದಸ್ಯ ಡುಮಾ ಭಾಷಣ ಮಾಡಲು ಥನ್‌ಬರ್ಗ್‌ರನ್ನು ರಷ್ಯಾಕ್ಕೆ ಆಹ್ವಾನಿಸಿದ್ದರು.

ಸ್ವೀಡನ್ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾರವರು ವಿಶ್ವಸಂಸ್ಥೆಯಲ್ಲಿ ಮಾಡಿದ್ದ ’ನಿಮಗೆಷ್ಟು ಧೈರ್ಯ?’ ಭಾಷಣಕ್ಕೆ ಲಕ್ಷಾಂಜರ ಜನ ತಲೆ ತೂಗಿದ್ದರು. ಗ್ರೇಟಾಳ ಧೈರ್ಯ, ಆಲೋಚನೆ’ಳು ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯವನ್ನು ಕಸಿದು ಬಿಟ್ಟಿರಿ ಎಂದು ಗ್ರೇಟಾ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...