Homeಅಂತರಾಷ್ಟ್ರೀಯಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪರಿಸರ ಜಾಗೃತಿ ಭಾಷಣ ಮಾಡಿ ವಿಶ್ವದ ಗಮನ ಸೆಳೆದ 16ರ ಪೋರಿ, ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ಬೇಡಿಕೆಗಳನ್ನು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಟೀಕಿಸಿದ್ದಾರೆ.

ಮಾಸ್ಕೋದಲ್ಲಿ ನಡೆದ ಇಂಧನ ಸಮಾವೇಶದಲ್ಲಿ ಮಾತನಾಡಿದ ವ್ಲಾಡಿಮರ್ ಪುಟಿನ್, ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಬಾಲಕಿ ಗ್ರೇಟಾ ಅವಾಸ್ತವಿಕ ಬೇಡಿಕೆಗಳನ್ನು ಮಂಡಿಸಿದ್ದಾರೆ. ಗ್ರೇಟಾ ಭಾಷಣ ಸಾಕಷ್ಟು ನಿರಾಸೆ ಮೂಡಿಸಿತು. ಭಾಷಣದ ಬಗ್ಗೆ ಯಾವುದೇ ಉತ್ಪ್ರೇಕ್ಷೆ ಮಾಡಬಾರದು ಎಂದರು.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

“ಆಧುನಿಕ ಜಗತ್ತು ಸಂಕೀರ್ಣ ಮತ್ತು ವಿಭಿನ್ನವಾಗಿದೆ ಎಂದು ಯಾರೂ ಗ್ರೇಟಾಗೆ ವಿವರಿಸಿಲ್ಲ. ಆಫ್ರಿಕಾದಲ್ಲಿ ಅಥವಾ ಏಷ್ಯಾದ ಅನೇಕ ದೇಶಗಳಲ್ಲಿನ ಜನರು ಸ್ವೀಡನ್‌ನಂತೆಯೇ ಅದೇ ಸಂಪತ್ತಿನ ಮಟ್ಟದಲ್ಲಿ ಬದುಕಲು ಬಯಸುತ್ತಾರೆ.” ಎಂದು ಪುಟಿನ್ ಹೇಳಿದ್ದಾರೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಗ್ರೇಟಾ ಪರಿಸರ ಜಾಗೃತಿ ಪಾಠ ಮಾಡಲಿ. ಅವರು ಬಡತನದಲ್ಲಯೇ ಮುಂದುವರೆಯಬೇಕು ಮತ್ತು ಸ್ವೀಡನ್‌ನಂತ ಆಗಬಾರದೆಂದು ಆಕೆ ಹೇಳಬೇಕಿದೆ. ಬಾಲಕಿಯನ್ನು ಕೆಲ ಗುಂಪುಗಳು ತಮ್ಮ ಸ್ವಾರ್ಥ ಗುರಿ ಸಾಧನೆಗೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದ ಅವರು ಆ ಗುಂಪುಗಳ ಹೆಸರನ್ನು ಉಲ್ಲೇಖಿಸಲಿಲ್ಲ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಥನ್ಬರ್ಗ್ ಸಹ ಗ್ರೇಟಾಳನ್ನು ಅಪಹಾಸ್ಯ ಮಾಡಿದ್ದರು. ಕೆನಡಾದ ಸಂಸತ್ ಸದಸ್ಯ ಮ್ಯಾಕ್ಸಿಮ್ ಬರ್ನಿಯರ್ ಒಂದು ಹೆಜ್ಜೆ ಮುಂದೆ ಹೋಗಿ ಆಕೆ ಅಲಾರಮಿಸ್ಟ್ ಮತ್ತು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟೀಕಿಸಿದ್ದರು. “ನಮ್ಮ ಹಕ್ಕೊತ್ತಾಯಗಳನ್ನು ನಿಭಾಯಿಸಲು ಸಾಧ್ಯವಾಗದವರು ಮಾತ್ರ ಮಕ್ಕಳ ಅಪಹಾಸ್ಯ ಮಾಡುತ್ತಾರೆ” ಎಂದು ಥನ್ಬರ್ಗ್ ಪ್ರತಿಕ್ರಿಯೆ ನೀಡಿದ್ದರು.

ಒಂದು ವರ್ಷದ ಹಿಂದೆ ಸ್ವೀಡಿಷ್ ಸಂಸತ್ತಿನ ಹೊರಗೆ ಥನ್‌ಬರ್ಗ್‌ರ ಏಕಾಂತ ಪ್ರತಿಭಟನೆಯಿಂದ ಪ್ರೇರಿತರಾಗಿ, ಹವಾಮಾನ ವೈಪರೀತ್ಯದ ಬಗ್ಗೆ ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ಜನರು ಜಗತ್ತಿನಾದ್ಯಂತ ಇಂದು ಬೀದಿಗಿಳಿದಿದ್ದಾರೆ.

“ನೀವು ನನ್ನ ಕನಸುಗಳನ್ನು ಮತ್ತು ನನ್ನ ಬಾಲ್ಯವನ್ನು ನಿಮ್ಮ ಖಾಲಿ ಮಾತುಗಳಿಂದ ಕದ್ದಿದ್ದೀರಿ” ಎಂದು ಗ್ರೇಟಾ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದರು.

ಈ ವಾರದ ಆರಂಭದಲ್ಲಿ, ರಷ್ಯಾದ ಸಂಸತ್ತಿನ ಸದಸ್ಯ ಡುಮಾ ಭಾಷಣ ಮಾಡಲು ಥನ್‌ಬರ್ಗ್‌ರನ್ನು ರಷ್ಯಾಕ್ಕೆ ಆಹ್ವಾನಿಸಿದ್ದರು.

ಸ್ವೀಡನ್ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾರವರು ವಿಶ್ವಸಂಸ್ಥೆಯಲ್ಲಿ ಮಾಡಿದ್ದ ’ನಿಮಗೆಷ್ಟು ಧೈರ್ಯ?’ ಭಾಷಣಕ್ಕೆ ಲಕ್ಷಾಂಜರ ಜನ ತಲೆ ತೂಗಿದ್ದರು. ಗ್ರೇಟಾಳ ಧೈರ್ಯ, ಆಲೋಚನೆ’ಳು ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯವನ್ನು ಕಸಿದು ಬಿಟ್ಟಿರಿ ಎಂದು ಗ್ರೇಟಾ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...