Homeಅಂತರಾಷ್ಟ್ರೀಯಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪರಿಸರ ಜಾಗೃತಿ ಭಾಷಣ ಮಾಡಿ ವಿಶ್ವದ ಗಮನ ಸೆಳೆದ 16ರ ಪೋರಿ, ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ಬೇಡಿಕೆಗಳನ್ನು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಟೀಕಿಸಿದ್ದಾರೆ.

ಮಾಸ್ಕೋದಲ್ಲಿ ನಡೆದ ಇಂಧನ ಸಮಾವೇಶದಲ್ಲಿ ಮಾತನಾಡಿದ ವ್ಲಾಡಿಮರ್ ಪುಟಿನ್, ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಬಾಲಕಿ ಗ್ರೇಟಾ ಅವಾಸ್ತವಿಕ ಬೇಡಿಕೆಗಳನ್ನು ಮಂಡಿಸಿದ್ದಾರೆ. ಗ್ರೇಟಾ ಭಾಷಣ ಸಾಕಷ್ಟು ನಿರಾಸೆ ಮೂಡಿಸಿತು. ಭಾಷಣದ ಬಗ್ಗೆ ಯಾವುದೇ ಉತ್ಪ್ರೇಕ್ಷೆ ಮಾಡಬಾರದು ಎಂದರು.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

“ಆಧುನಿಕ ಜಗತ್ತು ಸಂಕೀರ್ಣ ಮತ್ತು ವಿಭಿನ್ನವಾಗಿದೆ ಎಂದು ಯಾರೂ ಗ್ರೇಟಾಗೆ ವಿವರಿಸಿಲ್ಲ. ಆಫ್ರಿಕಾದಲ್ಲಿ ಅಥವಾ ಏಷ್ಯಾದ ಅನೇಕ ದೇಶಗಳಲ್ಲಿನ ಜನರು ಸ್ವೀಡನ್‌ನಂತೆಯೇ ಅದೇ ಸಂಪತ್ತಿನ ಮಟ್ಟದಲ್ಲಿ ಬದುಕಲು ಬಯಸುತ್ತಾರೆ.” ಎಂದು ಪುಟಿನ್ ಹೇಳಿದ್ದಾರೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಗ್ರೇಟಾ ಪರಿಸರ ಜಾಗೃತಿ ಪಾಠ ಮಾಡಲಿ. ಅವರು ಬಡತನದಲ್ಲಯೇ ಮುಂದುವರೆಯಬೇಕು ಮತ್ತು ಸ್ವೀಡನ್‌ನಂತ ಆಗಬಾರದೆಂದು ಆಕೆ ಹೇಳಬೇಕಿದೆ. ಬಾಲಕಿಯನ್ನು ಕೆಲ ಗುಂಪುಗಳು ತಮ್ಮ ಸ್ವಾರ್ಥ ಗುರಿ ಸಾಧನೆಗೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದ ಅವರು ಆ ಗುಂಪುಗಳ ಹೆಸರನ್ನು ಉಲ್ಲೇಖಿಸಲಿಲ್ಲ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಥನ್ಬರ್ಗ್ ಸಹ ಗ್ರೇಟಾಳನ್ನು ಅಪಹಾಸ್ಯ ಮಾಡಿದ್ದರು. ಕೆನಡಾದ ಸಂಸತ್ ಸದಸ್ಯ ಮ್ಯಾಕ್ಸಿಮ್ ಬರ್ನಿಯರ್ ಒಂದು ಹೆಜ್ಜೆ ಮುಂದೆ ಹೋಗಿ ಆಕೆ ಅಲಾರಮಿಸ್ಟ್ ಮತ್ತು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟೀಕಿಸಿದ್ದರು. “ನಮ್ಮ ಹಕ್ಕೊತ್ತಾಯಗಳನ್ನು ನಿಭಾಯಿಸಲು ಸಾಧ್ಯವಾಗದವರು ಮಾತ್ರ ಮಕ್ಕಳ ಅಪಹಾಸ್ಯ ಮಾಡುತ್ತಾರೆ” ಎಂದು ಥನ್ಬರ್ಗ್ ಪ್ರತಿಕ್ರಿಯೆ ನೀಡಿದ್ದರು.

ಒಂದು ವರ್ಷದ ಹಿಂದೆ ಸ್ವೀಡಿಷ್ ಸಂಸತ್ತಿನ ಹೊರಗೆ ಥನ್‌ಬರ್ಗ್‌ರ ಏಕಾಂತ ಪ್ರತಿಭಟನೆಯಿಂದ ಪ್ರೇರಿತರಾಗಿ, ಹವಾಮಾನ ವೈಪರೀತ್ಯದ ಬಗ್ಗೆ ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ಜನರು ಜಗತ್ತಿನಾದ್ಯಂತ ಇಂದು ಬೀದಿಗಿಳಿದಿದ್ದಾರೆ.

“ನೀವು ನನ್ನ ಕನಸುಗಳನ್ನು ಮತ್ತು ನನ್ನ ಬಾಲ್ಯವನ್ನು ನಿಮ್ಮ ಖಾಲಿ ಮಾತುಗಳಿಂದ ಕದ್ದಿದ್ದೀರಿ” ಎಂದು ಗ್ರೇಟಾ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದರು.

ಈ ವಾರದ ಆರಂಭದಲ್ಲಿ, ರಷ್ಯಾದ ಸಂಸತ್ತಿನ ಸದಸ್ಯ ಡುಮಾ ಭಾಷಣ ಮಾಡಲು ಥನ್‌ಬರ್ಗ್‌ರನ್ನು ರಷ್ಯಾಕ್ಕೆ ಆಹ್ವಾನಿಸಿದ್ದರು.

ಸ್ವೀಡನ್ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾರವರು ವಿಶ್ವಸಂಸ್ಥೆಯಲ್ಲಿ ಮಾಡಿದ್ದ ’ನಿಮಗೆಷ್ಟು ಧೈರ್ಯ?’ ಭಾಷಣಕ್ಕೆ ಲಕ್ಷಾಂಜರ ಜನ ತಲೆ ತೂಗಿದ್ದರು. ಗ್ರೇಟಾಳ ಧೈರ್ಯ, ಆಲೋಚನೆ’ಳು ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯವನ್ನು ಕಸಿದು ಬಿಟ್ಟಿರಿ ಎಂದು ಗ್ರೇಟಾ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...