Homeಅಂತರಾಷ್ಟ್ರೀಯಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪರಿಸರ ಜಾಗೃತಿ ಭಾಷಣ ಮಾಡಿ ವಿಶ್ವದ ಗಮನ ಸೆಳೆದ 16ರ ಪೋರಿ, ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ಬೇಡಿಕೆಗಳನ್ನು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಟೀಕಿಸಿದ್ದಾರೆ.

ಮಾಸ್ಕೋದಲ್ಲಿ ನಡೆದ ಇಂಧನ ಸಮಾವೇಶದಲ್ಲಿ ಮಾತನಾಡಿದ ವ್ಲಾಡಿಮರ್ ಪುಟಿನ್, ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಬಾಲಕಿ ಗ್ರೇಟಾ ಅವಾಸ್ತವಿಕ ಬೇಡಿಕೆಗಳನ್ನು ಮಂಡಿಸಿದ್ದಾರೆ. ಗ್ರೇಟಾ ಭಾಷಣ ಸಾಕಷ್ಟು ನಿರಾಸೆ ಮೂಡಿಸಿತು. ಭಾಷಣದ ಬಗ್ಗೆ ಯಾವುದೇ ಉತ್ಪ್ರೇಕ್ಷೆ ಮಾಡಬಾರದು ಎಂದರು.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

“ಆಧುನಿಕ ಜಗತ್ತು ಸಂಕೀರ್ಣ ಮತ್ತು ವಿಭಿನ್ನವಾಗಿದೆ ಎಂದು ಯಾರೂ ಗ್ರೇಟಾಗೆ ವಿವರಿಸಿಲ್ಲ. ಆಫ್ರಿಕಾದಲ್ಲಿ ಅಥವಾ ಏಷ್ಯಾದ ಅನೇಕ ದೇಶಗಳಲ್ಲಿನ ಜನರು ಸ್ವೀಡನ್‌ನಂತೆಯೇ ಅದೇ ಸಂಪತ್ತಿನ ಮಟ್ಟದಲ್ಲಿ ಬದುಕಲು ಬಯಸುತ್ತಾರೆ.” ಎಂದು ಪುಟಿನ್ ಹೇಳಿದ್ದಾರೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಗ್ರೇಟಾ ಪರಿಸರ ಜಾಗೃತಿ ಪಾಠ ಮಾಡಲಿ. ಅವರು ಬಡತನದಲ್ಲಯೇ ಮುಂದುವರೆಯಬೇಕು ಮತ್ತು ಸ್ವೀಡನ್‌ನಂತ ಆಗಬಾರದೆಂದು ಆಕೆ ಹೇಳಬೇಕಿದೆ. ಬಾಲಕಿಯನ್ನು ಕೆಲ ಗುಂಪುಗಳು ತಮ್ಮ ಸ್ವಾರ್ಥ ಗುರಿ ಸಾಧನೆಗೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದ ಅವರು ಆ ಗುಂಪುಗಳ ಹೆಸರನ್ನು ಉಲ್ಲೇಖಿಸಲಿಲ್ಲ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಥನ್ಬರ್ಗ್ ಸಹ ಗ್ರೇಟಾಳನ್ನು ಅಪಹಾಸ್ಯ ಮಾಡಿದ್ದರು. ಕೆನಡಾದ ಸಂಸತ್ ಸದಸ್ಯ ಮ್ಯಾಕ್ಸಿಮ್ ಬರ್ನಿಯರ್ ಒಂದು ಹೆಜ್ಜೆ ಮುಂದೆ ಹೋಗಿ ಆಕೆ ಅಲಾರಮಿಸ್ಟ್ ಮತ್ತು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟೀಕಿಸಿದ್ದರು. “ನಮ್ಮ ಹಕ್ಕೊತ್ತಾಯಗಳನ್ನು ನಿಭಾಯಿಸಲು ಸಾಧ್ಯವಾಗದವರು ಮಾತ್ರ ಮಕ್ಕಳ ಅಪಹಾಸ್ಯ ಮಾಡುತ್ತಾರೆ” ಎಂದು ಥನ್ಬರ್ಗ್ ಪ್ರತಿಕ್ರಿಯೆ ನೀಡಿದ್ದರು.

ಒಂದು ವರ್ಷದ ಹಿಂದೆ ಸ್ವೀಡಿಷ್ ಸಂಸತ್ತಿನ ಹೊರಗೆ ಥನ್‌ಬರ್ಗ್‌ರ ಏಕಾಂತ ಪ್ರತಿಭಟನೆಯಿಂದ ಪ್ರೇರಿತರಾಗಿ, ಹವಾಮಾನ ವೈಪರೀತ್ಯದ ಬಗ್ಗೆ ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ಜನರು ಜಗತ್ತಿನಾದ್ಯಂತ ಇಂದು ಬೀದಿಗಿಳಿದಿದ್ದಾರೆ.

“ನೀವು ನನ್ನ ಕನಸುಗಳನ್ನು ಮತ್ತು ನನ್ನ ಬಾಲ್ಯವನ್ನು ನಿಮ್ಮ ಖಾಲಿ ಮಾತುಗಳಿಂದ ಕದ್ದಿದ್ದೀರಿ” ಎಂದು ಗ್ರೇಟಾ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದರು.

ಈ ವಾರದ ಆರಂಭದಲ್ಲಿ, ರಷ್ಯಾದ ಸಂಸತ್ತಿನ ಸದಸ್ಯ ಡುಮಾ ಭಾಷಣ ಮಾಡಲು ಥನ್‌ಬರ್ಗ್‌ರನ್ನು ರಷ್ಯಾಕ್ಕೆ ಆಹ್ವಾನಿಸಿದ್ದರು.

ಸ್ವೀಡನ್ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾರವರು ವಿಶ್ವಸಂಸ್ಥೆಯಲ್ಲಿ ಮಾಡಿದ್ದ ’ನಿಮಗೆಷ್ಟು ಧೈರ್ಯ?’ ಭಾಷಣಕ್ಕೆ ಲಕ್ಷಾಂಜರ ಜನ ತಲೆ ತೂಗಿದ್ದರು. ಗ್ರೇಟಾಳ ಧೈರ್ಯ, ಆಲೋಚನೆ’ಳು ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯವನ್ನು ಕಸಿದು ಬಿಟ್ಟಿರಿ ಎಂದು ಗ್ರೇಟಾ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...