Homeಅಂತರಾಷ್ಟ್ರೀಯಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಪರಿಸರ ಪಾಠ ಮಾಡಿ: ಗ್ರೇಟಾ ಭಾಷಣಕ್ಕೆ ಪುಟಿನ್ ಟೀಕೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪರಿಸರ ಜಾಗೃತಿ ಭಾಷಣ ಮಾಡಿ ವಿಶ್ವದ ಗಮನ ಸೆಳೆದ 16ರ ಪೋರಿ, ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ಬೇಡಿಕೆಗಳನ್ನು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಟೀಕಿಸಿದ್ದಾರೆ.

ಮಾಸ್ಕೋದಲ್ಲಿ ನಡೆದ ಇಂಧನ ಸಮಾವೇಶದಲ್ಲಿ ಮಾತನಾಡಿದ ವ್ಲಾಡಿಮರ್ ಪುಟಿನ್, ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಬಾಲಕಿ ಗ್ರೇಟಾ ಅವಾಸ್ತವಿಕ ಬೇಡಿಕೆಗಳನ್ನು ಮಂಡಿಸಿದ್ದಾರೆ. ಗ್ರೇಟಾ ಭಾಷಣ ಸಾಕಷ್ಟು ನಿರಾಸೆ ಮೂಡಿಸಿತು. ಭಾಷಣದ ಬಗ್ಗೆ ಯಾವುದೇ ಉತ್ಪ್ರೇಕ್ಷೆ ಮಾಡಬಾರದು ಎಂದರು.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

“ಆಧುನಿಕ ಜಗತ್ತು ಸಂಕೀರ್ಣ ಮತ್ತು ವಿಭಿನ್ನವಾಗಿದೆ ಎಂದು ಯಾರೂ ಗ್ರೇಟಾಗೆ ವಿವರಿಸಿಲ್ಲ. ಆಫ್ರಿಕಾದಲ್ಲಿ ಅಥವಾ ಏಷ್ಯಾದ ಅನೇಕ ದೇಶಗಳಲ್ಲಿನ ಜನರು ಸ್ವೀಡನ್‌ನಂತೆಯೇ ಅದೇ ಸಂಪತ್ತಿನ ಮಟ್ಟದಲ್ಲಿ ಬದುಕಲು ಬಯಸುತ್ತಾರೆ.” ಎಂದು ಪುಟಿನ್ ಹೇಳಿದ್ದಾರೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಹೋಗಿ ಗ್ರೇಟಾ ಪರಿಸರ ಜಾಗೃತಿ ಪಾಠ ಮಾಡಲಿ. ಅವರು ಬಡತನದಲ್ಲಯೇ ಮುಂದುವರೆಯಬೇಕು ಮತ್ತು ಸ್ವೀಡನ್‌ನಂತ ಆಗಬಾರದೆಂದು ಆಕೆ ಹೇಳಬೇಕಿದೆ. ಬಾಲಕಿಯನ್ನು ಕೆಲ ಗುಂಪುಗಳು ತಮ್ಮ ಸ್ವಾರ್ಥ ಗುರಿ ಸಾಧನೆಗೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದ ಅವರು ಆ ಗುಂಪುಗಳ ಹೆಸರನ್ನು ಉಲ್ಲೇಖಿಸಲಿಲ್ಲ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಥನ್ಬರ್ಗ್ ಸಹ ಗ್ರೇಟಾಳನ್ನು ಅಪಹಾಸ್ಯ ಮಾಡಿದ್ದರು. ಕೆನಡಾದ ಸಂಸತ್ ಸದಸ್ಯ ಮ್ಯಾಕ್ಸಿಮ್ ಬರ್ನಿಯರ್ ಒಂದು ಹೆಜ್ಜೆ ಮುಂದೆ ಹೋಗಿ ಆಕೆ ಅಲಾರಮಿಸ್ಟ್ ಮತ್ತು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟೀಕಿಸಿದ್ದರು. “ನಮ್ಮ ಹಕ್ಕೊತ್ತಾಯಗಳನ್ನು ನಿಭಾಯಿಸಲು ಸಾಧ್ಯವಾಗದವರು ಮಾತ್ರ ಮಕ್ಕಳ ಅಪಹಾಸ್ಯ ಮಾಡುತ್ತಾರೆ” ಎಂದು ಥನ್ಬರ್ಗ್ ಪ್ರತಿಕ್ರಿಯೆ ನೀಡಿದ್ದರು.

ಒಂದು ವರ್ಷದ ಹಿಂದೆ ಸ್ವೀಡಿಷ್ ಸಂಸತ್ತಿನ ಹೊರಗೆ ಥನ್‌ಬರ್ಗ್‌ರ ಏಕಾಂತ ಪ್ರತಿಭಟನೆಯಿಂದ ಪ್ರೇರಿತರಾಗಿ, ಹವಾಮಾನ ವೈಪರೀತ್ಯದ ಬಗ್ಗೆ ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ಜನರು ಜಗತ್ತಿನಾದ್ಯಂತ ಇಂದು ಬೀದಿಗಿಳಿದಿದ್ದಾರೆ.

“ನೀವು ನನ್ನ ಕನಸುಗಳನ್ನು ಮತ್ತು ನನ್ನ ಬಾಲ್ಯವನ್ನು ನಿಮ್ಮ ಖಾಲಿ ಮಾತುಗಳಿಂದ ಕದ್ದಿದ್ದೀರಿ” ಎಂದು ಗ್ರೇಟಾ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದರು.

ಈ ವಾರದ ಆರಂಭದಲ್ಲಿ, ರಷ್ಯಾದ ಸಂಸತ್ತಿನ ಸದಸ್ಯ ಡುಮಾ ಭಾಷಣ ಮಾಡಲು ಥನ್‌ಬರ್ಗ್‌ರನ್ನು ರಷ್ಯಾಕ್ಕೆ ಆಹ್ವಾನಿಸಿದ್ದರು.

ಸ್ವೀಡನ್ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾರವರು ವಿಶ್ವಸಂಸ್ಥೆಯಲ್ಲಿ ಮಾಡಿದ್ದ ’ನಿಮಗೆಷ್ಟು ಧೈರ್ಯ?’ ಭಾಷಣಕ್ಕೆ ಲಕ್ಷಾಂಜರ ಜನ ತಲೆ ತೂಗಿದ್ದರು. ಗ್ರೇಟಾಳ ಧೈರ್ಯ, ಆಲೋಚನೆ’ಳು ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯವನ್ನು ಕಸಿದು ಬಿಟ್ಟಿರಿ ಎಂದು ಗ್ರೇಟಾ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...