Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...