Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...