Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....