Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...