Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...