Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...