Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...