Homeಮುಖಪುಟನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ: ವಿವಾದಾತ್ಮಕ ಹೇಳಿಕೆಯ ನಂತರ ಸ್ಪಷ್ಟನೆ ನೀಡಿದ ಸುಪ್ರೀಂ

ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ: ವಿವಾದಾತ್ಮಕ ಹೇಳಿಕೆಯ ನಂತರ ಸ್ಪಷ್ಟನೆ ನೀಡಿದ ಸುಪ್ರೀಂ

- Advertisement -
- Advertisement -

“ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ” ಎಂದು ಸಿಜೆಐ ಎ ಎಸ್‌ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್‌ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಇತ್ತೀಚೆಗೆ ಅತ್ಯಾಚಾರ ಸಂತ್ರಸ್ತೆಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಸ್ ಎ ಬೋಬಡೆ, “ಕಳೆದ ವಾರ ಅತ್ಯಾಚಾರ ಪ್ರಕರಣವೊಂದರ ವಿಚಾರಣೆ ವೇಳೆ ನಾನು ಆಡಿದ ಮಾತುಗಳು ಮಹಿಳೆಯರಿಗೆ ಅಗೌರವ ಸೂಚಿಸುತ್ತಿರುವ ರೀತಿಯಲ್ಲಿದೆ ಎಂದು ಸಂಪೂರ್ಣವಾಗಿ ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ನಾವು ಆತನಿಗೆ (ಅತ್ಯಾಚಾರ ಆರೋಪಿಗೆ) ವಿವಾಹವಾಗಲು ಹೇಳಿಲ್ಲ. ನೀನು ಮದುವೆಯಾಗುತ್ತೀಯ? ಎಂದು ಕೇಳಿದೆವು. ʼಮದುವೆಯಾಗು’ ಎಂದು ಹೇಳಿಲ್ಲ” ಎಂದು ಸಿಜೆಐ ಬೋಬಡೆ ಹೇಳಿದರು. ಈ ಸಂಸ್ಥೆಗೆ ಅದರಲ್ಲೂ ಪ್ರಮುಖವಾಗಿ ಈ ಪೀಠ ಮಹಿಳೆಯರ ಬಗ್ಗೆ ಅತ್ಯುನ್ನತ ಗೌರವ ಹೊಂದಿದೆ” ಎಂದೂ ಅವರು ಹೇಳಿದರು.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್, “ಆಕೆಯನ್ನು ಮದುವೆಯಾಗುತ್ತೀರಾ..? ನೀವು ಮದುವೆಯಾಗುವುದಾದರೆ ನಾವು ಸಹಾಯ ಮಾಡಬಲ್ಲೆವು. ಇಲ್ಲದೇ ಇದ್ದರೆ ನೀವು ನೌಕರಿ ಕಳೆದುಕೊಂಡು ಜೈಲಿಗೆ ಹೋಗಬೇಕಾಗುತ್ತದೆ. ನೀವು ಬಾಲಕಿಗೆ ಆಮಿಷವೊಡ್ಡಿ ಅತ್ಯಾಚಾರವೆಸಗಿದ್ದೀರ. ನಾನು ಬಲವಂತ ಪಡಿಸುವುದಿಲ್ಲ” ಎಂದು ಹೇಳಿತ್ತು.

ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು, ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

ಆದರೆ ಅತ್ಯಾಚಾರಕ್ಕೆ ವಿವಾಹವೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ತೀರ್ಮಾನಿಸಲು ಹೊರಟಂತಿದೆ ಎಂಬ ಅಭಿಪ್ರಾಯದೊಂದಿಗೆ ವ್ಯಾಪಕ ಟೀಕೆಗಳು ಹರಿದು ಬಂದಿದ್ದವು.

ಸಂತ್ರಸ್ತೆಗೆ 18 ವರ್ಷ ಪೂರೈಸಿದ ನಂತರ ಆಕೆಯನ್ನು ವಿವಾಹವಾಗುವುದಾಗಿ ಆರೋಪಿ ಒಪ್ಪಿರುವ ಕುರಿತ ದಾಖಲೆಗಳ ಆಧಾರದಲ್ಲಿ ಸುಪ್ರೀಂ ಕೋರ್ಟ್ ಹಾಗೆ ಪ್ರಶ್ನಿಸಿತ್ತು ಎಂದು ಕೋರ್ಟ್ ಅಧಿಕಾರಿಗಳು ನಂತರ ಸ್ಪಷ್ಟೀಕರಣ ನೀಡಿದ್ದರು.

ಇದನ್ನೂ ಓದಿ: ಹಳತು ವಿವೇಕ: ಅಧಿಕಾರ ಸ್ಥಾನದಿಂದ ದರ್ಪ ತೋರಿಸುವವರ ವಿರುದ್ಧ ಕೂಡಲೇ ಪ್ರತಿಭಟಿಸುತ್ತಿದ್ದ ಲಂಕೇಶ್ ಪತ್ರಿಕೆ: ಪ್ರೊ. ಎಸ್. ಚಂದ್ರಶೇಖರ್

ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು, ಪ್ರಖ್ಯಾತ ನಾಗರಿಕರು, ಬುದ್ಧಿಜೀವಿಗಳು, ಬರಹಗಾರರು ಮತ್ತು ಕಲಾವಿದರು ಮುಖ್ಯ ನ್ಯಾಯಾಧೀಶರಿಗೆ ಕ್ಷಮೆಯಾಚಿಸಬೇಕು ಮತ್ತು ಟೀಕೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮುಕ್ತ ಪತ್ರ ಬರೆದಿದ್ದಾರೆ.

ಇನ್ನು ವಕೀಲರ ಸಂಘಟನೆಯಾದ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್‌ ಜಸ್ಟಿಸ್ (AILAJ) ಕೂಡ ನ್ಯಾಯಮೂರ್ತಿಗಳ ನಡೆಯನ್ನು ಖಂಡಿಸಿದ್ದು, ನ್ಯಾಯಾಲಯದ ಘನತೆ ಉಳಿಸಿರಿ ಎಂದಿದ್ದಾರೆ.

2015ರ ಮಧ್ಯಪ್ರದೇಶ ವರ್ಸಸ್ ಮದನ್‌ಲಾಲ್ (7 SCC 681) ಪ್ರಕರಣವನ್ನು ಉಲ್ಲೇಖಿಸಿರುವ ಸಂಘವು “ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನದಲ್ಲಿ, ಯಾವುದೇ ಸಂದರ್ಭದಲ್ಲೂ ರಾಜಿ ಮಾಡಿಕೊಳ್ಳುವ ಕಲ್ಪನೆಯನ್ನು ನಿಜವಾಗಿಯೂ ಯೋಚಿಸಲಾಗುವುದಿಲ್ಲ” ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಮತ್ತೆ ನೆನಪಿಸಿದೆ. ನ್ಯಾಯಾಲಯಗಳು ಸಂಪೂರ್ಣವಾಗಿ ಉಳಿಯಬೇಕು ಎಂದು ನಾವು ಒತ್ತು ನೀಡುತ್ತೇವೆ” ಎಂದಿದೆ.

“ಸಿಜೆಐ ಹೇಳಿಕೆಗಳು ಸಮಾನತೆಯ ಸಾಂವಿಧಾನಿಕ ಖಾತರಿಗೆ ಧಕ್ಕೆ ತರುವಂತಿದೆ. ಮಹಿಳೆಯರನ್ನು ಕಡಿಮೆ ನಾಗರಿಕರ ಸ್ಥಾನಮಾನಕ್ಕೆ ಇಳಿಸಿದೆ. ಇದು ಮಹಿಳೆಯ ಹಕ್ಕಿನ ಸಮಗ್ರ ಉಲ್ಲಂಘನೆಯಾಗಿದೆ. ನಾವು ಸಮಾಜವಾಗಿ, ಅದರ ರೂಪಗಳು ಮತ್ತು ಅನ್ಯಾಯದ ಪ್ರಶ್ನೆಗಳಿಗೆ ಉತ್ತರ ಹುಡುಕಬೇಕು. ನಾವು ಅದನ್ನು ಮಾಡದಿದ್ದಲ್ಲಿ, ನಾವು ಸಮಾಜದ ಅನ್ಯಾಯಗಳಿಗೆ ಕಾರಣವಾಗುತ್ತೇವೆ. ಈ ಹೇಳಿಕೆಗಳಿಂದ, ಸುಪ್ರೀಂ ಕೋರ್ಟ್ ಈ ನಿಖರವಾದ ಅಪಾಯವನ್ನು ಎದುರಿಸುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...