Homeಮುಖಪುಟನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ: ವಿವಾದಾತ್ಮಕ ಹೇಳಿಕೆಯ ನಂತರ ಸ್ಪಷ್ಟನೆ ನೀಡಿದ ಸುಪ್ರೀಂ

ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ: ವಿವಾದಾತ್ಮಕ ಹೇಳಿಕೆಯ ನಂತರ ಸ್ಪಷ್ಟನೆ ನೀಡಿದ ಸುಪ್ರೀಂ

- Advertisement -
- Advertisement -

“ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ” ಎಂದು ಸಿಜೆಐ ಎ ಎಸ್‌ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್‌ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಇತ್ತೀಚೆಗೆ ಅತ್ಯಾಚಾರ ಸಂತ್ರಸ್ತೆಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಸ್ ಎ ಬೋಬಡೆ, “ಕಳೆದ ವಾರ ಅತ್ಯಾಚಾರ ಪ್ರಕರಣವೊಂದರ ವಿಚಾರಣೆ ವೇಳೆ ನಾನು ಆಡಿದ ಮಾತುಗಳು ಮಹಿಳೆಯರಿಗೆ ಅಗೌರವ ಸೂಚಿಸುತ್ತಿರುವ ರೀತಿಯಲ್ಲಿದೆ ಎಂದು ಸಂಪೂರ್ಣವಾಗಿ ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ನಾವು ಆತನಿಗೆ (ಅತ್ಯಾಚಾರ ಆರೋಪಿಗೆ) ವಿವಾಹವಾಗಲು ಹೇಳಿಲ್ಲ. ನೀನು ಮದುವೆಯಾಗುತ್ತೀಯ? ಎಂದು ಕೇಳಿದೆವು. ʼಮದುವೆಯಾಗು’ ಎಂದು ಹೇಳಿಲ್ಲ” ಎಂದು ಸಿಜೆಐ ಬೋಬಡೆ ಹೇಳಿದರು. ಈ ಸಂಸ್ಥೆಗೆ ಅದರಲ್ಲೂ ಪ್ರಮುಖವಾಗಿ ಈ ಪೀಠ ಮಹಿಳೆಯರ ಬಗ್ಗೆ ಅತ್ಯುನ್ನತ ಗೌರವ ಹೊಂದಿದೆ” ಎಂದೂ ಅವರು ಹೇಳಿದರು.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್, “ಆಕೆಯನ್ನು ಮದುವೆಯಾಗುತ್ತೀರಾ..? ನೀವು ಮದುವೆಯಾಗುವುದಾದರೆ ನಾವು ಸಹಾಯ ಮಾಡಬಲ್ಲೆವು. ಇಲ್ಲದೇ ಇದ್ದರೆ ನೀವು ನೌಕರಿ ಕಳೆದುಕೊಂಡು ಜೈಲಿಗೆ ಹೋಗಬೇಕಾಗುತ್ತದೆ. ನೀವು ಬಾಲಕಿಗೆ ಆಮಿಷವೊಡ್ಡಿ ಅತ್ಯಾಚಾರವೆಸಗಿದ್ದೀರ. ನಾನು ಬಲವಂತ ಪಡಿಸುವುದಿಲ್ಲ” ಎಂದು ಹೇಳಿತ್ತು.

ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು, ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

ಆದರೆ ಅತ್ಯಾಚಾರಕ್ಕೆ ವಿವಾಹವೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ತೀರ್ಮಾನಿಸಲು ಹೊರಟಂತಿದೆ ಎಂಬ ಅಭಿಪ್ರಾಯದೊಂದಿಗೆ ವ್ಯಾಪಕ ಟೀಕೆಗಳು ಹರಿದು ಬಂದಿದ್ದವು.

ಸಂತ್ರಸ್ತೆಗೆ 18 ವರ್ಷ ಪೂರೈಸಿದ ನಂತರ ಆಕೆಯನ್ನು ವಿವಾಹವಾಗುವುದಾಗಿ ಆರೋಪಿ ಒಪ್ಪಿರುವ ಕುರಿತ ದಾಖಲೆಗಳ ಆಧಾರದಲ್ಲಿ ಸುಪ್ರೀಂ ಕೋರ್ಟ್ ಹಾಗೆ ಪ್ರಶ್ನಿಸಿತ್ತು ಎಂದು ಕೋರ್ಟ್ ಅಧಿಕಾರಿಗಳು ನಂತರ ಸ್ಪಷ್ಟೀಕರಣ ನೀಡಿದ್ದರು.

ಇದನ್ನೂ ಓದಿ: ಹಳತು ವಿವೇಕ: ಅಧಿಕಾರ ಸ್ಥಾನದಿಂದ ದರ್ಪ ತೋರಿಸುವವರ ವಿರುದ್ಧ ಕೂಡಲೇ ಪ್ರತಿಭಟಿಸುತ್ತಿದ್ದ ಲಂಕೇಶ್ ಪತ್ರಿಕೆ: ಪ್ರೊ. ಎಸ್. ಚಂದ್ರಶೇಖರ್

ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು, ಪ್ರಖ್ಯಾತ ನಾಗರಿಕರು, ಬುದ್ಧಿಜೀವಿಗಳು, ಬರಹಗಾರರು ಮತ್ತು ಕಲಾವಿದರು ಮುಖ್ಯ ನ್ಯಾಯಾಧೀಶರಿಗೆ ಕ್ಷಮೆಯಾಚಿಸಬೇಕು ಮತ್ತು ಟೀಕೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮುಕ್ತ ಪತ್ರ ಬರೆದಿದ್ದಾರೆ.

ಇನ್ನು ವಕೀಲರ ಸಂಘಟನೆಯಾದ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್‌ ಜಸ್ಟಿಸ್ (AILAJ) ಕೂಡ ನ್ಯಾಯಮೂರ್ತಿಗಳ ನಡೆಯನ್ನು ಖಂಡಿಸಿದ್ದು, ನ್ಯಾಯಾಲಯದ ಘನತೆ ಉಳಿಸಿರಿ ಎಂದಿದ್ದಾರೆ.

2015ರ ಮಧ್ಯಪ್ರದೇಶ ವರ್ಸಸ್ ಮದನ್‌ಲಾಲ್ (7 SCC 681) ಪ್ರಕರಣವನ್ನು ಉಲ್ಲೇಖಿಸಿರುವ ಸಂಘವು “ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನದಲ್ಲಿ, ಯಾವುದೇ ಸಂದರ್ಭದಲ್ಲೂ ರಾಜಿ ಮಾಡಿಕೊಳ್ಳುವ ಕಲ್ಪನೆಯನ್ನು ನಿಜವಾಗಿಯೂ ಯೋಚಿಸಲಾಗುವುದಿಲ್ಲ” ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಮತ್ತೆ ನೆನಪಿಸಿದೆ. ನ್ಯಾಯಾಲಯಗಳು ಸಂಪೂರ್ಣವಾಗಿ ಉಳಿಯಬೇಕು ಎಂದು ನಾವು ಒತ್ತು ನೀಡುತ್ತೇವೆ” ಎಂದಿದೆ.

“ಸಿಜೆಐ ಹೇಳಿಕೆಗಳು ಸಮಾನತೆಯ ಸಾಂವಿಧಾನಿಕ ಖಾತರಿಗೆ ಧಕ್ಕೆ ತರುವಂತಿದೆ. ಮಹಿಳೆಯರನ್ನು ಕಡಿಮೆ ನಾಗರಿಕರ ಸ್ಥಾನಮಾನಕ್ಕೆ ಇಳಿಸಿದೆ. ಇದು ಮಹಿಳೆಯ ಹಕ್ಕಿನ ಸಮಗ್ರ ಉಲ್ಲಂಘನೆಯಾಗಿದೆ. ನಾವು ಸಮಾಜವಾಗಿ, ಅದರ ರೂಪಗಳು ಮತ್ತು ಅನ್ಯಾಯದ ಪ್ರಶ್ನೆಗಳಿಗೆ ಉತ್ತರ ಹುಡುಕಬೇಕು. ನಾವು ಅದನ್ನು ಮಾಡದಿದ್ದಲ್ಲಿ, ನಾವು ಸಮಾಜದ ಅನ್ಯಾಯಗಳಿಗೆ ಕಾರಣವಾಗುತ್ತೇವೆ. ಈ ಹೇಳಿಕೆಗಳಿಂದ, ಸುಪ್ರೀಂ ಕೋರ್ಟ್ ಈ ನಿಖರವಾದ ಅಪಾಯವನ್ನು ಎದುರಿಸುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...