Homeಕರ್ನಾಟಕಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟಿದ್ದ ಪೈಕಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಹೊಸಪೇಟೆಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ‘ಸಮರ್ಪಣೆ ಸಂಕಲ್ಪ’ ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಮಾಜಿ ಪ್ರಧಾನಿ  ಇಂದಿರಾಗಾಂಧಿಯವರ ಪ್ರತಿಮೆ ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿದರು.

ಮೊದಲ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ 30 ಹೊಸ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿಯವರು ತಾವು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ ಜನರ ಮುಂದೆ ಸುಳ್ಳು ಹೇಳಿಕೊಂಡು ಏಕೆ ತಿರುಗುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತಿ ವರ್ಷ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ರೂಪಾಯಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದ್ದರು. ಅದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ

ಈಗ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿದೆ. ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಬೀತಾಗಿದೆ: ಸಿಎಂ

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಅದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದು ಸಿಎಂ ಹೇಳಿದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?

2014ರಲ್ಲಿ 10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆ. ನಮ್ಮ ಸರ್ಕಾರದ ಪರ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿಗೆ ಆರೆಂಜ್, ರಾಜ್ಯದ ವಿವಿಧೆಡೆ ಎಲ್ಲೋ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....