Homeಕರ್ನಾಟಕಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟಿದ್ದ ಪೈಕಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಹೊಸಪೇಟೆಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ‘ಸಮರ್ಪಣೆ ಸಂಕಲ್ಪ’ ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಮಾಜಿ ಪ್ರಧಾನಿ  ಇಂದಿರಾಗಾಂಧಿಯವರ ಪ್ರತಿಮೆ ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿದರು.

ಮೊದಲ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ 30 ಹೊಸ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿಯವರು ತಾವು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ ಜನರ ಮುಂದೆ ಸುಳ್ಳು ಹೇಳಿಕೊಂಡು ಏಕೆ ತಿರುಗುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತಿ ವರ್ಷ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ರೂಪಾಯಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದ್ದರು. ಅದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ

ಈಗ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿದೆ. ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಬೀತಾಗಿದೆ: ಸಿಎಂ

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಅದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದು ಸಿಎಂ ಹೇಳಿದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?

2014ರಲ್ಲಿ 10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆ. ನಮ್ಮ ಸರ್ಕಾರದ ಪರ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿಗೆ ಆರೆಂಜ್, ರಾಜ್ಯದ ವಿವಿಧೆಡೆ ಎಲ್ಲೋ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...