Homeಕರ್ನಾಟಕಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟಿದ್ದ ಪೈಕಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಹೊಸಪೇಟೆಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ‘ಸಮರ್ಪಣೆ ಸಂಕಲ್ಪ’ ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಮಾಜಿ ಪ್ರಧಾನಿ  ಇಂದಿರಾಗಾಂಧಿಯವರ ಪ್ರತಿಮೆ ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿದರು.

ಮೊದಲ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ 30 ಹೊಸ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿಯವರು ತಾವು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ ಜನರ ಮುಂದೆ ಸುಳ್ಳು ಹೇಳಿಕೊಂಡು ಏಕೆ ತಿರುಗುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತಿ ವರ್ಷ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ರೂಪಾಯಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದ್ದರು. ಅದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ

ಈಗ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿದೆ. ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಬೀತಾಗಿದೆ: ಸಿಎಂ

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಅದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದು ಸಿಎಂ ಹೇಳಿದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?

2014ರಲ್ಲಿ 10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆ. ನಮ್ಮ ಸರ್ಕಾರದ ಪರ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿಗೆ ಆರೆಂಜ್, ರಾಜ್ಯದ ವಿವಿಧೆಡೆ ಎಲ್ಲೋ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...