Homeಕರ್ನಾಟಕಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

- Advertisement -
- Advertisement -

ಮೂರು ಹಳ್ಳಿಗಳನ್ನು ಕೈಬಿಡಬೇಕು ಮತ್ತು ಪ್ರಸ್ತುತ ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬೇಡಿ ಎಂದು ರೈತರು ಪ್ರಮುಖವಾಗಿ ಎರಡು ವಿನಂತಿಗಳನ್ನು ಮಾಡಿಕೊಂಡಿದ್ದರು, ಈ ಬೇಡಿಕೆಗಳನ್ನು ನಾವು ಈಡೇರಿಸಿದ್ದು, ರೈತರು ಹೋರಾಟವನ್ನು ಕೈಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ. ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರವನ್ನು ನೀಡಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಎರಡು ಬೇಡಿಕೆ ಈಡೇರಿಸಿದ್ದೇವೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಸರ್ಕಾರ ಬಹಳ ಮುಂದೆ ಹೋಗಿ ಇಷ್ಟೆಲ್ಲ ಕೆಲಸ ಮಾಡಿದೆ. ದಯವಿಟ್ಟು ಹೋರಾಟವನ್ನು ಕೈಬಿಡಿ ಎಂದು ವಿನಂತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

“ಇಂದಿನ ದಿನಗಳಲ್ಲಿ ಕೈಗಾರಿಕೆಗಳು ಕೂಡಾ ಬರಬೇಕು ಮತ್ತು ರೈತರಿಗೂ ಅನುಕೂಲ ಅಗಬೇಕಿದೆ. ಕೈಗಾರಿಕೆಗಳ ವಿಚಾರದಲ್ಲಿ ಉಳಿದ ರಾಜ್ಯಗಳು ಎಷ್ಟೊಂದು ಸ್ಪರ್ಧಾತ್ಮಕವಾಗಿ ನಡೆದುಕೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದಿದೆ. ತೀರಾ ಕಡಿಮೆ ಬೆಲೆಗೆ ಕೈಗಾರಿಕೆಗಳಿಗೆ ಭೂಮಿಯನ್ನು ನೀಡುತ್ತಿವೆ. ಕೈಗಾರಿಕೆಗಳು ತರಬೇಕಾಗುತ್ತದೆ ಹಾಗೂ ಹಾಗೆ ಆದರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರೈತರು ಕೂಡಾ ಅತ್ಯಂತ ಮಹತ್ವದವರೇ ಆಗಿದ್ದಾರೆ. ನಾನು ಹಾಗೂ ಮುನಿಯಪ್ಪ ಕೂಡಾ ರೈತ ಕುಟುಂಬದಿಂದ ಬಂದಂತಹವರು. ಹೀಗಾಗಿ ನಿಮ್ಮ ಭಾವನೆಗಳನ್ನು ಅರ್ಥ ಮಾಡಿ ನಾವು ಮೂರು ಹಳ್ಳಿಗಳ 500 ಎಕರೆಗಳನ್ನು ಬಿಟ್ಟಿದ್ದೇವೆ. ಮುಂದಿನ ಕಾಲದಲ್ಲಿ ಚನ್ನರಾಯಪಟ್ಟಣದಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡಬೇಡಿ ಎಂದು ರೈತರ ಬೇಡಿಕೆ ಸಲ್ಲಿಸಿದ್ದು, ಅದನ್ನು ಒಪ್ಪಿಕೊಂಡಿದ್ದೇವೆ. ಜೊತೆಗೆ ಅಭಿವೃದ್ಧ ಭೂಮಿಯನ್ನು ಕೂಡಾ ನೀಡಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿ, ಮೊಟ್ಟಮೊದಲಿನ ಹಂತದಲ್ಲಿ ಈ ಹೋಬಳಿಯಲ್ಲಿ ಜಾಸ್ತಿಯಾಗಿ ಭೂಸ್ವಾಧೀನ ಆಗಿದ್ದು, ಅದನ್ನು ಕೈಬಿಡಬೇಕು ಎಂದು ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರನ್ನು ಒತ್ತಾಯ ಮಾಡಿದ್ದೆ ಎಂದು ಹೇಳಿದ್ದಾರೆ.

“ನೀರಾವರಿ ಭೂಮಿಯನ್ನು ಕೈಬಿಡಲೇಬೇಕು ಎಂದು ಕೂಡಾ ಒತ್ತಾಯ ಮಾಡಿದ್ದೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಅಂದರೆ ಸುಮಾರು 500 ಎಕರೆ ನೀರಾವರಿ ಭೂಮಿಯನ್ನು ಬಿಟ್ಟಿದ್ದಾರೆ. ಜೊತೆಗೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಇನ್ನು ಮುಂದೆ ಭೂಸ್ವಾಧೀನ ಮಾಡಬಾರದು ಎಂದು ಒತ್ತಾಯ ಕೂಡಾ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿಯವರಾಗಿದ್ದಾರೆ. ಅವರು ರೈತರಿಗಾಗಿ ಏನೂ ಮಾಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಹೋರಾಟ ಸ್ಥಳಕ್ಕೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮಾತುಕೊಟ್ಟಿದ್ದರು. ಅದರಂತೆ ಅವರ ಎರಡು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇಂತಹ ಘಟನೆ ರಾಜ್ಯದಲ್ಲಿ ನಡೆದಿದ್ದು ಇದೆ ಮೊದಲ ಬಾರಿಯಾಗಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಾವು ಈ ಮಟ್ಟದಲ್ಲಿ ರೈತರ ಪರವಾಗಿ ಇದ್ದೇವೆ. ನಮಗೆ ಕೈಗಾರಿಕೆಗಳು ಕೂಡಾ ಬರಬೇಕಿದೆ. ಈ ಕೈಗಾರಿಕೆಗಳು ಬರುವಾಗ ನೇರವಾಗಿ ಜಮೀನು ಕಳೆದುಕೊಳ್ಳುವವರಿಗೆ ಅಭಿವೃದ್ಧಿ ಹೊಂದಿರುವ ಭೂಮಿಯನ್ನು ನೀಡಲಿದ್ದೇವೆ. ನಾವು ಈ ರೀತಿ ತೀರ್ಮಾನ ತೆಗೆದುಕೊಂಡಿದ್ದೇವೆ. ಇಷ್ಟಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ಹೋರಾಟ ಸಮಿತಿಯ ಜೊತೆಗೆ ಹೇಳಿ, ಹೋರಾಟ ಕೈಬಿಡಬೇಕು ಎಂದು ಕೇಳಿಕೊಂಡಿದ್ದೇನೆ” ಎಂದು ಮುನಿಯಪ್ಪ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟವು ‘ದೇವನಹಳ್ಳಿ ಚಲೋ’ ಹೋರಾಟವನ್ನು ಆಯೋಜಿಸಿದೆ. ಎರಡು ಬೇಡಿಕೆ ಈಡೇರಿಸಿದ್ದೇವೆ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...