Homeಕರ್ನಾಟಕಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

- Advertisement -
- Advertisement -

ಮೂರು ಹಳ್ಳಿಗಳನ್ನು ಕೈಬಿಡಬೇಕು ಮತ್ತು ಪ್ರಸ್ತುತ ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬೇಡಿ ಎಂದು ರೈತರು ಪ್ರಮುಖವಾಗಿ ಎರಡು ವಿನಂತಿಗಳನ್ನು ಮಾಡಿಕೊಂಡಿದ್ದರು, ಈ ಬೇಡಿಕೆಗಳನ್ನು ನಾವು ಈಡೇರಿಸಿದ್ದು, ರೈತರು ಹೋರಾಟವನ್ನು ಕೈಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ. ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರವನ್ನು ನೀಡಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಎರಡು ಬೇಡಿಕೆ ಈಡೇರಿಸಿದ್ದೇವೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಸರ್ಕಾರ ಬಹಳ ಮುಂದೆ ಹೋಗಿ ಇಷ್ಟೆಲ್ಲ ಕೆಲಸ ಮಾಡಿದೆ. ದಯವಿಟ್ಟು ಹೋರಾಟವನ್ನು ಕೈಬಿಡಿ ಎಂದು ವಿನಂತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

“ಇಂದಿನ ದಿನಗಳಲ್ಲಿ ಕೈಗಾರಿಕೆಗಳು ಕೂಡಾ ಬರಬೇಕು ಮತ್ತು ರೈತರಿಗೂ ಅನುಕೂಲ ಅಗಬೇಕಿದೆ. ಕೈಗಾರಿಕೆಗಳ ವಿಚಾರದಲ್ಲಿ ಉಳಿದ ರಾಜ್ಯಗಳು ಎಷ್ಟೊಂದು ಸ್ಪರ್ಧಾತ್ಮಕವಾಗಿ ನಡೆದುಕೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದಿದೆ. ತೀರಾ ಕಡಿಮೆ ಬೆಲೆಗೆ ಕೈಗಾರಿಕೆಗಳಿಗೆ ಭೂಮಿಯನ್ನು ನೀಡುತ್ತಿವೆ. ಕೈಗಾರಿಕೆಗಳು ತರಬೇಕಾಗುತ್ತದೆ ಹಾಗೂ ಹಾಗೆ ಆದರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರೈತರು ಕೂಡಾ ಅತ್ಯಂತ ಮಹತ್ವದವರೇ ಆಗಿದ್ದಾರೆ. ನಾನು ಹಾಗೂ ಮುನಿಯಪ್ಪ ಕೂಡಾ ರೈತ ಕುಟುಂಬದಿಂದ ಬಂದಂತಹವರು. ಹೀಗಾಗಿ ನಿಮ್ಮ ಭಾವನೆಗಳನ್ನು ಅರ್ಥ ಮಾಡಿ ನಾವು ಮೂರು ಹಳ್ಳಿಗಳ 500 ಎಕರೆಗಳನ್ನು ಬಿಟ್ಟಿದ್ದೇವೆ. ಮುಂದಿನ ಕಾಲದಲ್ಲಿ ಚನ್ನರಾಯಪಟ್ಟಣದಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡಬೇಡಿ ಎಂದು ರೈತರ ಬೇಡಿಕೆ ಸಲ್ಲಿಸಿದ್ದು, ಅದನ್ನು ಒಪ್ಪಿಕೊಂಡಿದ್ದೇವೆ. ಜೊತೆಗೆ ಅಭಿವೃದ್ಧ ಭೂಮಿಯನ್ನು ಕೂಡಾ ನೀಡಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿ, ಮೊಟ್ಟಮೊದಲಿನ ಹಂತದಲ್ಲಿ ಈ ಹೋಬಳಿಯಲ್ಲಿ ಜಾಸ್ತಿಯಾಗಿ ಭೂಸ್ವಾಧೀನ ಆಗಿದ್ದು, ಅದನ್ನು ಕೈಬಿಡಬೇಕು ಎಂದು ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರನ್ನು ಒತ್ತಾಯ ಮಾಡಿದ್ದೆ ಎಂದು ಹೇಳಿದ್ದಾರೆ.

“ನೀರಾವರಿ ಭೂಮಿಯನ್ನು ಕೈಬಿಡಲೇಬೇಕು ಎಂದು ಕೂಡಾ ಒತ್ತಾಯ ಮಾಡಿದ್ದೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಅಂದರೆ ಸುಮಾರು 500 ಎಕರೆ ನೀರಾವರಿ ಭೂಮಿಯನ್ನು ಬಿಟ್ಟಿದ್ದಾರೆ. ಜೊತೆಗೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಇನ್ನು ಮುಂದೆ ಭೂಸ್ವಾಧೀನ ಮಾಡಬಾರದು ಎಂದು ಒತ್ತಾಯ ಕೂಡಾ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿಯವರಾಗಿದ್ದಾರೆ. ಅವರು ರೈತರಿಗಾಗಿ ಏನೂ ಮಾಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಹೋರಾಟ ಸ್ಥಳಕ್ಕೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮಾತುಕೊಟ್ಟಿದ್ದರು. ಅದರಂತೆ ಅವರ ಎರಡು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇಂತಹ ಘಟನೆ ರಾಜ್ಯದಲ್ಲಿ ನಡೆದಿದ್ದು ಇದೆ ಮೊದಲ ಬಾರಿಯಾಗಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಾವು ಈ ಮಟ್ಟದಲ್ಲಿ ರೈತರ ಪರವಾಗಿ ಇದ್ದೇವೆ. ನಮಗೆ ಕೈಗಾರಿಕೆಗಳು ಕೂಡಾ ಬರಬೇಕಿದೆ. ಈ ಕೈಗಾರಿಕೆಗಳು ಬರುವಾಗ ನೇರವಾಗಿ ಜಮೀನು ಕಳೆದುಕೊಳ್ಳುವವರಿಗೆ ಅಭಿವೃದ್ಧಿ ಹೊಂದಿರುವ ಭೂಮಿಯನ್ನು ನೀಡಲಿದ್ದೇವೆ. ನಾವು ಈ ರೀತಿ ತೀರ್ಮಾನ ತೆಗೆದುಕೊಂಡಿದ್ದೇವೆ. ಇಷ್ಟಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ಹೋರಾಟ ಸಮಿತಿಯ ಜೊತೆಗೆ ಹೇಳಿ, ಹೋರಾಟ ಕೈಬಿಡಬೇಕು ಎಂದು ಕೇಳಿಕೊಂಡಿದ್ದೇನೆ” ಎಂದು ಮುನಿಯಪ್ಪ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟವು ‘ದೇವನಹಳ್ಳಿ ಚಲೋ’ ಹೋರಾಟವನ್ನು ಆಯೋಜಿಸಿದೆ. ಎರಡು ಬೇಡಿಕೆ ಈಡೇರಿಸಿದ್ದೇವೆ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...