Homeಕರ್ನಾಟಕಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

- Advertisement -
- Advertisement -

ಮೂರು ಹಳ್ಳಿಗಳನ್ನು ಕೈಬಿಡಬೇಕು ಮತ್ತು ಪ್ರಸ್ತುತ ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬೇಡಿ ಎಂದು ರೈತರು ಪ್ರಮುಖವಾಗಿ ಎರಡು ವಿನಂತಿಗಳನ್ನು ಮಾಡಿಕೊಂಡಿದ್ದರು, ಈ ಬೇಡಿಕೆಗಳನ್ನು ನಾವು ಈಡೇರಿಸಿದ್ದು, ರೈತರು ಹೋರಾಟವನ್ನು ಕೈಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ. ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರವನ್ನು ನೀಡಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಎರಡು ಬೇಡಿಕೆ ಈಡೇರಿಸಿದ್ದೇವೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಸರ್ಕಾರ ಬಹಳ ಮುಂದೆ ಹೋಗಿ ಇಷ್ಟೆಲ್ಲ ಕೆಲಸ ಮಾಡಿದೆ. ದಯವಿಟ್ಟು ಹೋರಾಟವನ್ನು ಕೈಬಿಡಿ ಎಂದು ವಿನಂತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

“ಇಂದಿನ ದಿನಗಳಲ್ಲಿ ಕೈಗಾರಿಕೆಗಳು ಕೂಡಾ ಬರಬೇಕು ಮತ್ತು ರೈತರಿಗೂ ಅನುಕೂಲ ಅಗಬೇಕಿದೆ. ಕೈಗಾರಿಕೆಗಳ ವಿಚಾರದಲ್ಲಿ ಉಳಿದ ರಾಜ್ಯಗಳು ಎಷ್ಟೊಂದು ಸ್ಪರ್ಧಾತ್ಮಕವಾಗಿ ನಡೆದುಕೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದಿದೆ. ತೀರಾ ಕಡಿಮೆ ಬೆಲೆಗೆ ಕೈಗಾರಿಕೆಗಳಿಗೆ ಭೂಮಿಯನ್ನು ನೀಡುತ್ತಿವೆ. ಕೈಗಾರಿಕೆಗಳು ತರಬೇಕಾಗುತ್ತದೆ ಹಾಗೂ ಹಾಗೆ ಆದರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರೈತರು ಕೂಡಾ ಅತ್ಯಂತ ಮಹತ್ವದವರೇ ಆಗಿದ್ದಾರೆ. ನಾನು ಹಾಗೂ ಮುನಿಯಪ್ಪ ಕೂಡಾ ರೈತ ಕುಟುಂಬದಿಂದ ಬಂದಂತಹವರು. ಹೀಗಾಗಿ ನಿಮ್ಮ ಭಾವನೆಗಳನ್ನು ಅರ್ಥ ಮಾಡಿ ನಾವು ಮೂರು ಹಳ್ಳಿಗಳ 500 ಎಕರೆಗಳನ್ನು ಬಿಟ್ಟಿದ್ದೇವೆ. ಮುಂದಿನ ಕಾಲದಲ್ಲಿ ಚನ್ನರಾಯಪಟ್ಟಣದಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡಬೇಡಿ ಎಂದು ರೈತರ ಬೇಡಿಕೆ ಸಲ್ಲಿಸಿದ್ದು, ಅದನ್ನು ಒಪ್ಪಿಕೊಂಡಿದ್ದೇವೆ. ಜೊತೆಗೆ ಅಭಿವೃದ್ಧ ಭೂಮಿಯನ್ನು ಕೂಡಾ ನೀಡಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿ, ಮೊಟ್ಟಮೊದಲಿನ ಹಂತದಲ್ಲಿ ಈ ಹೋಬಳಿಯಲ್ಲಿ ಜಾಸ್ತಿಯಾಗಿ ಭೂಸ್ವಾಧೀನ ಆಗಿದ್ದು, ಅದನ್ನು ಕೈಬಿಡಬೇಕು ಎಂದು ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರನ್ನು ಒತ್ತಾಯ ಮಾಡಿದ್ದೆ ಎಂದು ಹೇಳಿದ್ದಾರೆ.

“ನೀರಾವರಿ ಭೂಮಿಯನ್ನು ಕೈಬಿಡಲೇಬೇಕು ಎಂದು ಕೂಡಾ ಒತ್ತಾಯ ಮಾಡಿದ್ದೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಅಂದರೆ ಸುಮಾರು 500 ಎಕರೆ ನೀರಾವರಿ ಭೂಮಿಯನ್ನು ಬಿಟ್ಟಿದ್ದಾರೆ. ಜೊತೆಗೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಇನ್ನು ಮುಂದೆ ಭೂಸ್ವಾಧೀನ ಮಾಡಬಾರದು ಎಂದು ಒತ್ತಾಯ ಕೂಡಾ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿಯವರಾಗಿದ್ದಾರೆ. ಅವರು ರೈತರಿಗಾಗಿ ಏನೂ ಮಾಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಹೋರಾಟ ಸ್ಥಳಕ್ಕೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮಾತುಕೊಟ್ಟಿದ್ದರು. ಅದರಂತೆ ಅವರ ಎರಡು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇಂತಹ ಘಟನೆ ರಾಜ್ಯದಲ್ಲಿ ನಡೆದಿದ್ದು ಇದೆ ಮೊದಲ ಬಾರಿಯಾಗಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಾವು ಈ ಮಟ್ಟದಲ್ಲಿ ರೈತರ ಪರವಾಗಿ ಇದ್ದೇವೆ. ನಮಗೆ ಕೈಗಾರಿಕೆಗಳು ಕೂಡಾ ಬರಬೇಕಿದೆ. ಈ ಕೈಗಾರಿಕೆಗಳು ಬರುವಾಗ ನೇರವಾಗಿ ಜಮೀನು ಕಳೆದುಕೊಳ್ಳುವವರಿಗೆ ಅಭಿವೃದ್ಧಿ ಹೊಂದಿರುವ ಭೂಮಿಯನ್ನು ನೀಡಲಿದ್ದೇವೆ. ನಾವು ಈ ರೀತಿ ತೀರ್ಮಾನ ತೆಗೆದುಕೊಂಡಿದ್ದೇವೆ. ಇಷ್ಟಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ಹೋರಾಟ ಸಮಿತಿಯ ಜೊತೆಗೆ ಹೇಳಿ, ಹೋರಾಟ ಕೈಬಿಡಬೇಕು ಎಂದು ಕೇಳಿಕೊಂಡಿದ್ದೇನೆ” ಎಂದು ಮುನಿಯಪ್ಪ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟವು ‘ದೇವನಹಳ್ಳಿ ಚಲೋ’ ಹೋರಾಟವನ್ನು ಆಯೋಜಿಸಿದೆ. ಎರಡು ಬೇಡಿಕೆ ಈಡೇರಿಸಿದ್ದೇವೆ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...