Homeಕರ್ನಾಟಕಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ...

ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

- Advertisement -
- Advertisement -

ನೀಡಿದ ಭರವಸೆಗಳೆಲ್ಲವೂ ಸುಳ್ಳಾದವು. ಬಡಜನರಿಗೆ ಭೂಮಿ ಮತ್ತು ಮನೆಗಳನ್ನು ನೀಡುವಂತೆ ಒತ್ತಾಯಿಸಿ ಹಲವು ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್‌.ಎಸ್‌ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ಮತ್ತು ಭೂಮಿ ಇಲ್ಲದವರಿಗೆ ಭೂಮಿ, ಮನೆಯಿಲ್ಲದವರಿಗೆ ಮನೆಗಳನ್ನು ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭವಾಗಿದೆ.

ಮಧುಗಿರಿ ತಾಲೂಕಿನ ಬ್ಯಾಲ್ಯ, ಕೊಡಿಗೇನಹಳ್ಳಿ ಮತ್ತು ಶಿರಾ ತಾಲೂಕಿನಿಂದ ಆಗಮಿಸಿದ್ದ 100 ಹೆಚ್ಚು ಮಂದಿ ಭೂರಹಿತರು, ಮನೆ ಇಲ್ಲದ ಬಡವರು ವಾಸಕ್ಕೆ ಮನೆ ಉಳುಮೆ ಮಾಡಲು ಒಂದಿಷ್ಟು ಭೂಮಿ ನೀಡುವಂತೆ ಒತ್ತಾಯಿಸಿದರು. ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಹೋರಾತ್ರಿ ಧರಣಿಗೆ ಚಾಲನೆ ನೀಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಭಾರತೀಯರಾದ ಎಲ್ಲರಿಗೂ ಬದುಕಿ ಬಾಳುವ ಹಕ್ಕಿದೆ. ಬರೀ ಓಟು ಕೊಟ್ಟರೆ ಸಾಲದು ಊಟ ಕೊಡಬೇಕು, ಉದ್ಯೋಗ ಕೊಡಬೇಕು, ನೆಲೆ ಮತ್ತು ನೆಲ ಕೊಡಬೇಕು ಎಂದು ಒತ್ತಾಯಿಸಿದರು.

ಈ ಜನರನ್ನು ಕರಿಬೇವಿನ ಸೊಪ್ಪಿನಂತೆ ಬಳಸಬಾರದು. ರಸ ಬಿಟ್ಟು ಮೇಲೆ ಅದನ್ನು ಎಸೆಯುವಂತೆ ಜನರನ್ನು ಬಳಸಿ ಬೀದಿಗೆ ಎಸೆಯುವಂತೆ ಕಾಣುತ್ತಿದೆ ಈ ದೇಶ. ಜನರನ್ನು ಮರ್ಯಾದೆಯಿಂದ ನಡೆಸಿಕೊಳ್ಳುವುದನ್ನು ಮೊದಲು ಸರ್ಕಾರಗಳು, ಜನಪ್ರತಿನಿಧಿಗಳು ಕಲಿಯಬೇಕು. ಪೊಲೀಸರು, ಅಧಿಕಾರಿಗಳು, ಮಂತ್ರಿಗಳು, ಜಿಲ್ಲಾಧಿಕಾರಿ ಎಲ್ಲರೂ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಈ ಜನ ನಿಮಗೆ ಓಟು ಕೊಡೋರು. ಅಧಿಕಾರದಲ್ಲಿ ಕೂರಿಸೋರು. ಇವರನ್ನು ನೀವು ನಿರ್ಲಕ್ಷ್ಯ ಮಾಡ್ತೀರಾ? ಕಸದ ಕಡ್ಡಿಯಂತೆ ಕಾಣ್ತೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಷ್ಟು ದಿನ ಹಸಿದುಕೊಂಡಿರಬೇಕು. ಎಷ್ಟು ದಿನ ಬೀದಿಯಲ್ಲಿರಬೇಕು. ಮನೆ ನೀಡುವುದು, ಭೂಮಿ ನೀಡುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಇಲ್ಲಿದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನ ದಿಡ್ಡಹಳ್ಳಿಯಲ್ಲಿ ನೂರಾರು ಕುಟಂಬಗಳನ್ನು ಒಕ್ಕಲೆಬ್ಬಿಸಿದರು. ನಾವು ಹೋರಾಟ ಮಾಡಿದೆವು. ಪರಿಣಾಮ ಅವರಿಗೆ ಮನೆಗಳನ್ನು ನೀಡಲು ಸಿದ್ದತೆ ನಡೆದಿದೆ. ಮನೆ, ಭೂಮಿ ಪಡೆಯುವುದು ನಮ್ಮ ಹಕ್ಕು. ಸರ್ಕಾರವನ್ನು ಯಾರಿಗೋಸ್ಕರ ನಡೆಸುತ್ತೀರಿ. ಶ್ರೀಮಂತರಿಗಾಗಿ ನಡೆಸುತ್ತೀರಾ? ಬಡವರು ಬದುಕಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ವಂಚನೆ ಮಾಡೋರು ಪ್ರತಿನಿಧಿಗಳೇನ್ರಿ? ಅಯೋಗ್ಯರು ಅವರು. ಇಂಥವರು ನಮ್ಮ ಪ್ರತಿನಿಧಿಗಳಾ? ಒಂದು ತತ್ವಕ್ಕೆ ಬದ್ದರಾಗಲ್ಲ, ಒಂದು ಪಕ್ಷಕ್ಕೆ ಬದ್ದರಾಗಲ್ಲ, ವಿಚಾರಕ್ಕೆ ಬದ್ದರಾಗಿಲ್ಲ. ಮರ್ಯಾದೆ ಇಲ್ಲ ಇವರಿಗೆ. ಕಳಚಿಕೊಂಡು ಹೋಗುತ್ತಿರುತ್ತಾರೆ. ಇದೇನ್ರಿ ಇದು? ಇಂಥಾ ಅನ್ಯಾಯ ನಡೆಯುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರ್ತಿರಲ್ಲಾ ನೀವು ಯುವಕರು. ಇದಕ್ಕೇನಾ ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದು? ಲೂಟಿ ಮಾಡುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಲಕ್ಷಾಧಿಪತಿಗೆ ಜೈ ಅನ್ನುತ್ತೀರಾ? ಅವನು ಕೊಟ್ಟ ಹೆಂಡ, ಅವನು ಕೊಟ್ಟ ಖಂಡ ತಿಂದು ಜೈ ಅನ್ನೋದೇ ನಿಮ್ಮ ಬದುಕಾಗಿದೆಯೇ? ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಮರ್ಯಾದೆ ಇಲ್ಲದ ರಾಜಕೀಯ ಪಕ್ಷಗಳನ್ನು ನೋಡಿದ್ರೆ ಬೇಸರವಾಗುತ್ತೇ. ರಾಜಕೀಯ ಹೊಲಸೆದ್ದು ಹೊಗಿದೆ. ಸಿಕ್ಕಿದ್ದನ್ನು ಲೂಟಿ ಮಾಡಿಕೊಂಡು ಹೋಗಬಹುದು ಎಂದು ತಿಳಿದುಕೊಂಡಿದ್ದಾರೆ. ಪಿತೂರಿ ಮಾಡಿ ಇನ್ನೊಂದು ಪಕ್ಷವನ್ನು ಧ್ವಂಸ ಮಾಡಬೇಕೆಂದು ಚಿಂತನೆ ನಡೆಸುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಆಟ ಅನ್ನುತ್ತಾರೆ. ಆಟ ಆಡಬೇಕೆಂದರೆ ನೀವು ಮನೆಗೆ ಹೋಗಿ ಎಂದು ಕಿಡಿಕಾರಿದರು.

ಹಳ್ಳಿಗಳಲ್ಲಿ ಬಡವರು, ಆದಿವಾಸಿಗಳು, ದಲಿತರು ಸರ್ಕಾರಿ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡುವಂತೆ ಕೇಳುತ್ತಿದ್ದಾರೆ. ಸಮಸ್ಯೆ ತೀವ್ರವಾಗಿದೆ. ಆದರೂ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ ಮೂರು ವರ್ಷಗಳಿಂದಲೂ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟ ಮಾಡುತ್ತಲೇ ಬರುತ್ತಿದೆ ಎಂದು ಸಿರಿಮನೆ ನಾಗರಾಜ್ ಹೇಳಿದರು.

ಜಮೀನು ಇಲ್ಲದವರಿಗೆ, ಮನೆ ಇಲ್ಲದವರಿಗೆ ಭೂಮಿ ಮತ್ತು ಮನೆ ಕೊಡಬೇಕು. ಅಧಿಕಾರಿಗಳಲ್ಲಿ, ಜನಪ್ರತಿನಿಧಿಗಳಲ್ಲಿ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಆರು ಸುತ್ತಿನ ಹೋರಾರ ನಡೆದರೂ  ಕಿಮ್ಮತ್ತು ನೀಡುತ್ತಿಲ್ಲ. ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೋರಾಟಗಳನ್ನು ಮಾಡಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೇವೆ.  ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದೆ. ಭೂಮಿ ಮತ್ತು ಮನೆ ಒದಗಿಸುವ ಭರವಸೆಯನ್ನು ಜಗದೀಶ್ ಶೆಟ್ಟರ್ ನೀಡಿದ್ದರು. ಆದರೆ ಆಗಿರುವ ಕೆಲಸಗಳು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಲೇ ಇದೆ. ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೋರಾಟ ನಡೆಸಿದ ಭಾಗವಾಗಿ ಎರಡು ವರ್ಷಗಳಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ, ಆದರೆ ಅಧಿಕಾರಿಗಳ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...