Homeಕರ್ನಾಟಕಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ...

ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

- Advertisement -
- Advertisement -

ನೀಡಿದ ಭರವಸೆಗಳೆಲ್ಲವೂ ಸುಳ್ಳಾದವು. ಬಡಜನರಿಗೆ ಭೂಮಿ ಮತ್ತು ಮನೆಗಳನ್ನು ನೀಡುವಂತೆ ಒತ್ತಾಯಿಸಿ ಹಲವು ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್‌.ಎಸ್‌ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ಮತ್ತು ಭೂಮಿ ಇಲ್ಲದವರಿಗೆ ಭೂಮಿ, ಮನೆಯಿಲ್ಲದವರಿಗೆ ಮನೆಗಳನ್ನು ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭವಾಗಿದೆ.

ಮಧುಗಿರಿ ತಾಲೂಕಿನ ಬ್ಯಾಲ್ಯ, ಕೊಡಿಗೇನಹಳ್ಳಿ ಮತ್ತು ಶಿರಾ ತಾಲೂಕಿನಿಂದ ಆಗಮಿಸಿದ್ದ 100 ಹೆಚ್ಚು ಮಂದಿ ಭೂರಹಿತರು, ಮನೆ ಇಲ್ಲದ ಬಡವರು ವಾಸಕ್ಕೆ ಮನೆ ಉಳುಮೆ ಮಾಡಲು ಒಂದಿಷ್ಟು ಭೂಮಿ ನೀಡುವಂತೆ ಒತ್ತಾಯಿಸಿದರು. ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಹೋರಾತ್ರಿ ಧರಣಿಗೆ ಚಾಲನೆ ನೀಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಭಾರತೀಯರಾದ ಎಲ್ಲರಿಗೂ ಬದುಕಿ ಬಾಳುವ ಹಕ್ಕಿದೆ. ಬರೀ ಓಟು ಕೊಟ್ಟರೆ ಸಾಲದು ಊಟ ಕೊಡಬೇಕು, ಉದ್ಯೋಗ ಕೊಡಬೇಕು, ನೆಲೆ ಮತ್ತು ನೆಲ ಕೊಡಬೇಕು ಎಂದು ಒತ್ತಾಯಿಸಿದರು.

ಈ ಜನರನ್ನು ಕರಿಬೇವಿನ ಸೊಪ್ಪಿನಂತೆ ಬಳಸಬಾರದು. ರಸ ಬಿಟ್ಟು ಮೇಲೆ ಅದನ್ನು ಎಸೆಯುವಂತೆ ಜನರನ್ನು ಬಳಸಿ ಬೀದಿಗೆ ಎಸೆಯುವಂತೆ ಕಾಣುತ್ತಿದೆ ಈ ದೇಶ. ಜನರನ್ನು ಮರ್ಯಾದೆಯಿಂದ ನಡೆಸಿಕೊಳ್ಳುವುದನ್ನು ಮೊದಲು ಸರ್ಕಾರಗಳು, ಜನಪ್ರತಿನಿಧಿಗಳು ಕಲಿಯಬೇಕು. ಪೊಲೀಸರು, ಅಧಿಕಾರಿಗಳು, ಮಂತ್ರಿಗಳು, ಜಿಲ್ಲಾಧಿಕಾರಿ ಎಲ್ಲರೂ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಈ ಜನ ನಿಮಗೆ ಓಟು ಕೊಡೋರು. ಅಧಿಕಾರದಲ್ಲಿ ಕೂರಿಸೋರು. ಇವರನ್ನು ನೀವು ನಿರ್ಲಕ್ಷ್ಯ ಮಾಡ್ತೀರಾ? ಕಸದ ಕಡ್ಡಿಯಂತೆ ಕಾಣ್ತೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಷ್ಟು ದಿನ ಹಸಿದುಕೊಂಡಿರಬೇಕು. ಎಷ್ಟು ದಿನ ಬೀದಿಯಲ್ಲಿರಬೇಕು. ಮನೆ ನೀಡುವುದು, ಭೂಮಿ ನೀಡುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಇಲ್ಲಿದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನ ದಿಡ್ಡಹಳ್ಳಿಯಲ್ಲಿ ನೂರಾರು ಕುಟಂಬಗಳನ್ನು ಒಕ್ಕಲೆಬ್ಬಿಸಿದರು. ನಾವು ಹೋರಾಟ ಮಾಡಿದೆವು. ಪರಿಣಾಮ ಅವರಿಗೆ ಮನೆಗಳನ್ನು ನೀಡಲು ಸಿದ್ದತೆ ನಡೆದಿದೆ. ಮನೆ, ಭೂಮಿ ಪಡೆಯುವುದು ನಮ್ಮ ಹಕ್ಕು. ಸರ್ಕಾರವನ್ನು ಯಾರಿಗೋಸ್ಕರ ನಡೆಸುತ್ತೀರಿ. ಶ್ರೀಮಂತರಿಗಾಗಿ ನಡೆಸುತ್ತೀರಾ? ಬಡವರು ಬದುಕಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ವಂಚನೆ ಮಾಡೋರು ಪ್ರತಿನಿಧಿಗಳೇನ್ರಿ? ಅಯೋಗ್ಯರು ಅವರು. ಇಂಥವರು ನಮ್ಮ ಪ್ರತಿನಿಧಿಗಳಾ? ಒಂದು ತತ್ವಕ್ಕೆ ಬದ್ದರಾಗಲ್ಲ, ಒಂದು ಪಕ್ಷಕ್ಕೆ ಬದ್ದರಾಗಲ್ಲ, ವಿಚಾರಕ್ಕೆ ಬದ್ದರಾಗಿಲ್ಲ. ಮರ್ಯಾದೆ ಇಲ್ಲ ಇವರಿಗೆ. ಕಳಚಿಕೊಂಡು ಹೋಗುತ್ತಿರುತ್ತಾರೆ. ಇದೇನ್ರಿ ಇದು? ಇಂಥಾ ಅನ್ಯಾಯ ನಡೆಯುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರ್ತಿರಲ್ಲಾ ನೀವು ಯುವಕರು. ಇದಕ್ಕೇನಾ ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದು? ಲೂಟಿ ಮಾಡುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಲಕ್ಷಾಧಿಪತಿಗೆ ಜೈ ಅನ್ನುತ್ತೀರಾ? ಅವನು ಕೊಟ್ಟ ಹೆಂಡ, ಅವನು ಕೊಟ್ಟ ಖಂಡ ತಿಂದು ಜೈ ಅನ್ನೋದೇ ನಿಮ್ಮ ಬದುಕಾಗಿದೆಯೇ? ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಮರ್ಯಾದೆ ಇಲ್ಲದ ರಾಜಕೀಯ ಪಕ್ಷಗಳನ್ನು ನೋಡಿದ್ರೆ ಬೇಸರವಾಗುತ್ತೇ. ರಾಜಕೀಯ ಹೊಲಸೆದ್ದು ಹೊಗಿದೆ. ಸಿಕ್ಕಿದ್ದನ್ನು ಲೂಟಿ ಮಾಡಿಕೊಂಡು ಹೋಗಬಹುದು ಎಂದು ತಿಳಿದುಕೊಂಡಿದ್ದಾರೆ. ಪಿತೂರಿ ಮಾಡಿ ಇನ್ನೊಂದು ಪಕ್ಷವನ್ನು ಧ್ವಂಸ ಮಾಡಬೇಕೆಂದು ಚಿಂತನೆ ನಡೆಸುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಆಟ ಅನ್ನುತ್ತಾರೆ. ಆಟ ಆಡಬೇಕೆಂದರೆ ನೀವು ಮನೆಗೆ ಹೋಗಿ ಎಂದು ಕಿಡಿಕಾರಿದರು.

ಹಳ್ಳಿಗಳಲ್ಲಿ ಬಡವರು, ಆದಿವಾಸಿಗಳು, ದಲಿತರು ಸರ್ಕಾರಿ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡುವಂತೆ ಕೇಳುತ್ತಿದ್ದಾರೆ. ಸಮಸ್ಯೆ ತೀವ್ರವಾಗಿದೆ. ಆದರೂ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ ಮೂರು ವರ್ಷಗಳಿಂದಲೂ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟ ಮಾಡುತ್ತಲೇ ಬರುತ್ತಿದೆ ಎಂದು ಸಿರಿಮನೆ ನಾಗರಾಜ್ ಹೇಳಿದರು.

ಜಮೀನು ಇಲ್ಲದವರಿಗೆ, ಮನೆ ಇಲ್ಲದವರಿಗೆ ಭೂಮಿ ಮತ್ತು ಮನೆ ಕೊಡಬೇಕು. ಅಧಿಕಾರಿಗಳಲ್ಲಿ, ಜನಪ್ರತಿನಿಧಿಗಳಲ್ಲಿ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಆರು ಸುತ್ತಿನ ಹೋರಾರ ನಡೆದರೂ  ಕಿಮ್ಮತ್ತು ನೀಡುತ್ತಿಲ್ಲ. ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೋರಾಟಗಳನ್ನು ಮಾಡಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೇವೆ.  ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದೆ. ಭೂಮಿ ಮತ್ತು ಮನೆ ಒದಗಿಸುವ ಭರವಸೆಯನ್ನು ಜಗದೀಶ್ ಶೆಟ್ಟರ್ ನೀಡಿದ್ದರು. ಆದರೆ ಆಗಿರುವ ಕೆಲಸಗಳು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಲೇ ಇದೆ. ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೋರಾಟ ನಡೆಸಿದ ಭಾಗವಾಗಿ ಎರಡು ವರ್ಷಗಳಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ, ಆದರೆ ಅಧಿಕಾರಿಗಳ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...