Homeಕರ್ನಾಟಕಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ...

ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

- Advertisement -
- Advertisement -

ನೀಡಿದ ಭರವಸೆಗಳೆಲ್ಲವೂ ಸುಳ್ಳಾದವು. ಬಡಜನರಿಗೆ ಭೂಮಿ ಮತ್ತು ಮನೆಗಳನ್ನು ನೀಡುವಂತೆ ಒತ್ತಾಯಿಸಿ ಹಲವು ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್‌.ಎಸ್‌ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ಮತ್ತು ಭೂಮಿ ಇಲ್ಲದವರಿಗೆ ಭೂಮಿ, ಮನೆಯಿಲ್ಲದವರಿಗೆ ಮನೆಗಳನ್ನು ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭವಾಗಿದೆ.

ಮಧುಗಿರಿ ತಾಲೂಕಿನ ಬ್ಯಾಲ್ಯ, ಕೊಡಿಗೇನಹಳ್ಳಿ ಮತ್ತು ಶಿರಾ ತಾಲೂಕಿನಿಂದ ಆಗಮಿಸಿದ್ದ 100 ಹೆಚ್ಚು ಮಂದಿ ಭೂರಹಿತರು, ಮನೆ ಇಲ್ಲದ ಬಡವರು ವಾಸಕ್ಕೆ ಮನೆ ಉಳುಮೆ ಮಾಡಲು ಒಂದಿಷ್ಟು ಭೂಮಿ ನೀಡುವಂತೆ ಒತ್ತಾಯಿಸಿದರು. ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಹೋರಾತ್ರಿ ಧರಣಿಗೆ ಚಾಲನೆ ನೀಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಭಾರತೀಯರಾದ ಎಲ್ಲರಿಗೂ ಬದುಕಿ ಬಾಳುವ ಹಕ್ಕಿದೆ. ಬರೀ ಓಟು ಕೊಟ್ಟರೆ ಸಾಲದು ಊಟ ಕೊಡಬೇಕು, ಉದ್ಯೋಗ ಕೊಡಬೇಕು, ನೆಲೆ ಮತ್ತು ನೆಲ ಕೊಡಬೇಕು ಎಂದು ಒತ್ತಾಯಿಸಿದರು.

ಈ ಜನರನ್ನು ಕರಿಬೇವಿನ ಸೊಪ್ಪಿನಂತೆ ಬಳಸಬಾರದು. ರಸ ಬಿಟ್ಟು ಮೇಲೆ ಅದನ್ನು ಎಸೆಯುವಂತೆ ಜನರನ್ನು ಬಳಸಿ ಬೀದಿಗೆ ಎಸೆಯುವಂತೆ ಕಾಣುತ್ತಿದೆ ಈ ದೇಶ. ಜನರನ್ನು ಮರ್ಯಾದೆಯಿಂದ ನಡೆಸಿಕೊಳ್ಳುವುದನ್ನು ಮೊದಲು ಸರ್ಕಾರಗಳು, ಜನಪ್ರತಿನಿಧಿಗಳು ಕಲಿಯಬೇಕು. ಪೊಲೀಸರು, ಅಧಿಕಾರಿಗಳು, ಮಂತ್ರಿಗಳು, ಜಿಲ್ಲಾಧಿಕಾರಿ ಎಲ್ಲರೂ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಈ ಜನ ನಿಮಗೆ ಓಟು ಕೊಡೋರು. ಅಧಿಕಾರದಲ್ಲಿ ಕೂರಿಸೋರು. ಇವರನ್ನು ನೀವು ನಿರ್ಲಕ್ಷ್ಯ ಮಾಡ್ತೀರಾ? ಕಸದ ಕಡ್ಡಿಯಂತೆ ಕಾಣ್ತೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಷ್ಟು ದಿನ ಹಸಿದುಕೊಂಡಿರಬೇಕು. ಎಷ್ಟು ದಿನ ಬೀದಿಯಲ್ಲಿರಬೇಕು. ಮನೆ ನೀಡುವುದು, ಭೂಮಿ ನೀಡುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಇಲ್ಲಿದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನ ದಿಡ್ಡಹಳ್ಳಿಯಲ್ಲಿ ನೂರಾರು ಕುಟಂಬಗಳನ್ನು ಒಕ್ಕಲೆಬ್ಬಿಸಿದರು. ನಾವು ಹೋರಾಟ ಮಾಡಿದೆವು. ಪರಿಣಾಮ ಅವರಿಗೆ ಮನೆಗಳನ್ನು ನೀಡಲು ಸಿದ್ದತೆ ನಡೆದಿದೆ. ಮನೆ, ಭೂಮಿ ಪಡೆಯುವುದು ನಮ್ಮ ಹಕ್ಕು. ಸರ್ಕಾರವನ್ನು ಯಾರಿಗೋಸ್ಕರ ನಡೆಸುತ್ತೀರಿ. ಶ್ರೀಮಂತರಿಗಾಗಿ ನಡೆಸುತ್ತೀರಾ? ಬಡವರು ಬದುಕಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ವಂಚನೆ ಮಾಡೋರು ಪ್ರತಿನಿಧಿಗಳೇನ್ರಿ? ಅಯೋಗ್ಯರು ಅವರು. ಇಂಥವರು ನಮ್ಮ ಪ್ರತಿನಿಧಿಗಳಾ? ಒಂದು ತತ್ವಕ್ಕೆ ಬದ್ದರಾಗಲ್ಲ, ಒಂದು ಪಕ್ಷಕ್ಕೆ ಬದ್ದರಾಗಲ್ಲ, ವಿಚಾರಕ್ಕೆ ಬದ್ದರಾಗಿಲ್ಲ. ಮರ್ಯಾದೆ ಇಲ್ಲ ಇವರಿಗೆ. ಕಳಚಿಕೊಂಡು ಹೋಗುತ್ತಿರುತ್ತಾರೆ. ಇದೇನ್ರಿ ಇದು? ಇಂಥಾ ಅನ್ಯಾಯ ನಡೆಯುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರ್ತಿರಲ್ಲಾ ನೀವು ಯುವಕರು. ಇದಕ್ಕೇನಾ ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದು? ಲೂಟಿ ಮಾಡುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಲಕ್ಷಾಧಿಪತಿಗೆ ಜೈ ಅನ್ನುತ್ತೀರಾ? ಅವನು ಕೊಟ್ಟ ಹೆಂಡ, ಅವನು ಕೊಟ್ಟ ಖಂಡ ತಿಂದು ಜೈ ಅನ್ನೋದೇ ನಿಮ್ಮ ಬದುಕಾಗಿದೆಯೇ? ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಮರ್ಯಾದೆ ಇಲ್ಲದ ರಾಜಕೀಯ ಪಕ್ಷಗಳನ್ನು ನೋಡಿದ್ರೆ ಬೇಸರವಾಗುತ್ತೇ. ರಾಜಕೀಯ ಹೊಲಸೆದ್ದು ಹೊಗಿದೆ. ಸಿಕ್ಕಿದ್ದನ್ನು ಲೂಟಿ ಮಾಡಿಕೊಂಡು ಹೋಗಬಹುದು ಎಂದು ತಿಳಿದುಕೊಂಡಿದ್ದಾರೆ. ಪಿತೂರಿ ಮಾಡಿ ಇನ್ನೊಂದು ಪಕ್ಷವನ್ನು ಧ್ವಂಸ ಮಾಡಬೇಕೆಂದು ಚಿಂತನೆ ನಡೆಸುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಆಟ ಅನ್ನುತ್ತಾರೆ. ಆಟ ಆಡಬೇಕೆಂದರೆ ನೀವು ಮನೆಗೆ ಹೋಗಿ ಎಂದು ಕಿಡಿಕಾರಿದರು.

ಹಳ್ಳಿಗಳಲ್ಲಿ ಬಡವರು, ಆದಿವಾಸಿಗಳು, ದಲಿತರು ಸರ್ಕಾರಿ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡುವಂತೆ ಕೇಳುತ್ತಿದ್ದಾರೆ. ಸಮಸ್ಯೆ ತೀವ್ರವಾಗಿದೆ. ಆದರೂ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ ಮೂರು ವರ್ಷಗಳಿಂದಲೂ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟ ಮಾಡುತ್ತಲೇ ಬರುತ್ತಿದೆ ಎಂದು ಸಿರಿಮನೆ ನಾಗರಾಜ್ ಹೇಳಿದರು.

ಜಮೀನು ಇಲ್ಲದವರಿಗೆ, ಮನೆ ಇಲ್ಲದವರಿಗೆ ಭೂಮಿ ಮತ್ತು ಮನೆ ಕೊಡಬೇಕು. ಅಧಿಕಾರಿಗಳಲ್ಲಿ, ಜನಪ್ರತಿನಿಧಿಗಳಲ್ಲಿ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಆರು ಸುತ್ತಿನ ಹೋರಾರ ನಡೆದರೂ  ಕಿಮ್ಮತ್ತು ನೀಡುತ್ತಿಲ್ಲ. ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೋರಾಟಗಳನ್ನು ಮಾಡಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೇವೆ.  ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದೆ. ಭೂಮಿ ಮತ್ತು ಮನೆ ಒದಗಿಸುವ ಭರವಸೆಯನ್ನು ಜಗದೀಶ್ ಶೆಟ್ಟರ್ ನೀಡಿದ್ದರು. ಆದರೆ ಆಗಿರುವ ಕೆಲಸಗಳು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಲೇ ಇದೆ. ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೋರಾಟ ನಡೆಸಿದ ಭಾಗವಾಗಿ ಎರಡು ವರ್ಷಗಳಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ, ಆದರೆ ಅಧಿಕಾರಿಗಳ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...