Homeಕರ್ನಾಟಕಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ...

ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

- Advertisement -
- Advertisement -

ನೀಡಿದ ಭರವಸೆಗಳೆಲ್ಲವೂ ಸುಳ್ಳಾದವು. ಬಡಜನರಿಗೆ ಭೂಮಿ ಮತ್ತು ಮನೆಗಳನ್ನು ನೀಡುವಂತೆ ಒತ್ತಾಯಿಸಿ ಹಲವು ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್‌.ಎಸ್‌ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ಮತ್ತು ಭೂಮಿ ಇಲ್ಲದವರಿಗೆ ಭೂಮಿ, ಮನೆಯಿಲ್ಲದವರಿಗೆ ಮನೆಗಳನ್ನು ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭವಾಗಿದೆ.

ಮಧುಗಿರಿ ತಾಲೂಕಿನ ಬ್ಯಾಲ್ಯ, ಕೊಡಿಗೇನಹಳ್ಳಿ ಮತ್ತು ಶಿರಾ ತಾಲೂಕಿನಿಂದ ಆಗಮಿಸಿದ್ದ 100 ಹೆಚ್ಚು ಮಂದಿ ಭೂರಹಿತರು, ಮನೆ ಇಲ್ಲದ ಬಡವರು ವಾಸಕ್ಕೆ ಮನೆ ಉಳುಮೆ ಮಾಡಲು ಒಂದಿಷ್ಟು ಭೂಮಿ ನೀಡುವಂತೆ ಒತ್ತಾಯಿಸಿದರು. ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಹೋರಾತ್ರಿ ಧರಣಿಗೆ ಚಾಲನೆ ನೀಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಭಾರತೀಯರಾದ ಎಲ್ಲರಿಗೂ ಬದುಕಿ ಬಾಳುವ ಹಕ್ಕಿದೆ. ಬರೀ ಓಟು ಕೊಟ್ಟರೆ ಸಾಲದು ಊಟ ಕೊಡಬೇಕು, ಉದ್ಯೋಗ ಕೊಡಬೇಕು, ನೆಲೆ ಮತ್ತು ನೆಲ ಕೊಡಬೇಕು ಎಂದು ಒತ್ತಾಯಿಸಿದರು.

ಈ ಜನರನ್ನು ಕರಿಬೇವಿನ ಸೊಪ್ಪಿನಂತೆ ಬಳಸಬಾರದು. ರಸ ಬಿಟ್ಟು ಮೇಲೆ ಅದನ್ನು ಎಸೆಯುವಂತೆ ಜನರನ್ನು ಬಳಸಿ ಬೀದಿಗೆ ಎಸೆಯುವಂತೆ ಕಾಣುತ್ತಿದೆ ಈ ದೇಶ. ಜನರನ್ನು ಮರ್ಯಾದೆಯಿಂದ ನಡೆಸಿಕೊಳ್ಳುವುದನ್ನು ಮೊದಲು ಸರ್ಕಾರಗಳು, ಜನಪ್ರತಿನಿಧಿಗಳು ಕಲಿಯಬೇಕು. ಪೊಲೀಸರು, ಅಧಿಕಾರಿಗಳು, ಮಂತ್ರಿಗಳು, ಜಿಲ್ಲಾಧಿಕಾರಿ ಎಲ್ಲರೂ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಈ ಜನ ನಿಮಗೆ ಓಟು ಕೊಡೋರು. ಅಧಿಕಾರದಲ್ಲಿ ಕೂರಿಸೋರು. ಇವರನ್ನು ನೀವು ನಿರ್ಲಕ್ಷ್ಯ ಮಾಡ್ತೀರಾ? ಕಸದ ಕಡ್ಡಿಯಂತೆ ಕಾಣ್ತೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಷ್ಟು ದಿನ ಹಸಿದುಕೊಂಡಿರಬೇಕು. ಎಷ್ಟು ದಿನ ಬೀದಿಯಲ್ಲಿರಬೇಕು. ಮನೆ ನೀಡುವುದು, ಭೂಮಿ ನೀಡುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಇಲ್ಲಿದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನ ದಿಡ್ಡಹಳ್ಳಿಯಲ್ಲಿ ನೂರಾರು ಕುಟಂಬಗಳನ್ನು ಒಕ್ಕಲೆಬ್ಬಿಸಿದರು. ನಾವು ಹೋರಾಟ ಮಾಡಿದೆವು. ಪರಿಣಾಮ ಅವರಿಗೆ ಮನೆಗಳನ್ನು ನೀಡಲು ಸಿದ್ದತೆ ನಡೆದಿದೆ. ಮನೆ, ಭೂಮಿ ಪಡೆಯುವುದು ನಮ್ಮ ಹಕ್ಕು. ಸರ್ಕಾರವನ್ನು ಯಾರಿಗೋಸ್ಕರ ನಡೆಸುತ್ತೀರಿ. ಶ್ರೀಮಂತರಿಗಾಗಿ ನಡೆಸುತ್ತೀರಾ? ಬಡವರು ಬದುಕಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ವಂಚನೆ ಮಾಡೋರು ಪ್ರತಿನಿಧಿಗಳೇನ್ರಿ? ಅಯೋಗ್ಯರು ಅವರು. ಇಂಥವರು ನಮ್ಮ ಪ್ರತಿನಿಧಿಗಳಾ? ಒಂದು ತತ್ವಕ್ಕೆ ಬದ್ದರಾಗಲ್ಲ, ಒಂದು ಪಕ್ಷಕ್ಕೆ ಬದ್ದರಾಗಲ್ಲ, ವಿಚಾರಕ್ಕೆ ಬದ್ದರಾಗಿಲ್ಲ. ಮರ್ಯಾದೆ ಇಲ್ಲ ಇವರಿಗೆ. ಕಳಚಿಕೊಂಡು ಹೋಗುತ್ತಿರುತ್ತಾರೆ. ಇದೇನ್ರಿ ಇದು? ಇಂಥಾ ಅನ್ಯಾಯ ನಡೆಯುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರ್ತಿರಲ್ಲಾ ನೀವು ಯುವಕರು. ಇದಕ್ಕೇನಾ ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದು? ಲೂಟಿ ಮಾಡುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಲಕ್ಷಾಧಿಪತಿಗೆ ಜೈ ಅನ್ನುತ್ತೀರಾ? ಅವನು ಕೊಟ್ಟ ಹೆಂಡ, ಅವನು ಕೊಟ್ಟ ಖಂಡ ತಿಂದು ಜೈ ಅನ್ನೋದೇ ನಿಮ್ಮ ಬದುಕಾಗಿದೆಯೇ? ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಮರ್ಯಾದೆ ಇಲ್ಲದ ರಾಜಕೀಯ ಪಕ್ಷಗಳನ್ನು ನೋಡಿದ್ರೆ ಬೇಸರವಾಗುತ್ತೇ. ರಾಜಕೀಯ ಹೊಲಸೆದ್ದು ಹೊಗಿದೆ. ಸಿಕ್ಕಿದ್ದನ್ನು ಲೂಟಿ ಮಾಡಿಕೊಂಡು ಹೋಗಬಹುದು ಎಂದು ತಿಳಿದುಕೊಂಡಿದ್ದಾರೆ. ಪಿತೂರಿ ಮಾಡಿ ಇನ್ನೊಂದು ಪಕ್ಷವನ್ನು ಧ್ವಂಸ ಮಾಡಬೇಕೆಂದು ಚಿಂತನೆ ನಡೆಸುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಆಟ ಅನ್ನುತ್ತಾರೆ. ಆಟ ಆಡಬೇಕೆಂದರೆ ನೀವು ಮನೆಗೆ ಹೋಗಿ ಎಂದು ಕಿಡಿಕಾರಿದರು.

ಹಳ್ಳಿಗಳಲ್ಲಿ ಬಡವರು, ಆದಿವಾಸಿಗಳು, ದಲಿತರು ಸರ್ಕಾರಿ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡುವಂತೆ ಕೇಳುತ್ತಿದ್ದಾರೆ. ಸಮಸ್ಯೆ ತೀವ್ರವಾಗಿದೆ. ಆದರೂ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ ಮೂರು ವರ್ಷಗಳಿಂದಲೂ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟ ಮಾಡುತ್ತಲೇ ಬರುತ್ತಿದೆ ಎಂದು ಸಿರಿಮನೆ ನಾಗರಾಜ್ ಹೇಳಿದರು.

ಜಮೀನು ಇಲ್ಲದವರಿಗೆ, ಮನೆ ಇಲ್ಲದವರಿಗೆ ಭೂಮಿ ಮತ್ತು ಮನೆ ಕೊಡಬೇಕು. ಅಧಿಕಾರಿಗಳಲ್ಲಿ, ಜನಪ್ರತಿನಿಧಿಗಳಲ್ಲಿ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಆರು ಸುತ್ತಿನ ಹೋರಾರ ನಡೆದರೂ  ಕಿಮ್ಮತ್ತು ನೀಡುತ್ತಿಲ್ಲ. ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೋರಾಟಗಳನ್ನು ಮಾಡಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೇವೆ.  ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದೆ. ಭೂಮಿ ಮತ್ತು ಮನೆ ಒದಗಿಸುವ ಭರವಸೆಯನ್ನು ಜಗದೀಶ್ ಶೆಟ್ಟರ್ ನೀಡಿದ್ದರು. ಆದರೆ ಆಗಿರುವ ಕೆಲಸಗಳು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಲೇ ಇದೆ. ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೋರಾಟ ನಡೆಸಿದ ಭಾಗವಾಗಿ ಎರಡು ವರ್ಷಗಳಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ, ಆದರೆ ಅಧಿಕಾರಿಗಳ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...