Homeಕರ್ನಾಟಕಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ...

ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

- Advertisement -
- Advertisement -

ನೀಡಿದ ಭರವಸೆಗಳೆಲ್ಲವೂ ಸುಳ್ಳಾದವು. ಬಡಜನರಿಗೆ ಭೂಮಿ ಮತ್ತು ಮನೆಗಳನ್ನು ನೀಡುವಂತೆ ಒತ್ತಾಯಿಸಿ ಹಲವು ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್‌.ಎಸ್‌ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ಮತ್ತು ಭೂಮಿ ಇಲ್ಲದವರಿಗೆ ಭೂಮಿ, ಮನೆಯಿಲ್ಲದವರಿಗೆ ಮನೆಗಳನ್ನು ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭವಾಗಿದೆ.

ಮಧುಗಿರಿ ತಾಲೂಕಿನ ಬ್ಯಾಲ್ಯ, ಕೊಡಿಗೇನಹಳ್ಳಿ ಮತ್ತು ಶಿರಾ ತಾಲೂಕಿನಿಂದ ಆಗಮಿಸಿದ್ದ 100 ಹೆಚ್ಚು ಮಂದಿ ಭೂರಹಿತರು, ಮನೆ ಇಲ್ಲದ ಬಡವರು ವಾಸಕ್ಕೆ ಮನೆ ಉಳುಮೆ ಮಾಡಲು ಒಂದಿಷ್ಟು ಭೂಮಿ ನೀಡುವಂತೆ ಒತ್ತಾಯಿಸಿದರು. ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಹೋರಾತ್ರಿ ಧರಣಿಗೆ ಚಾಲನೆ ನೀಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಭಾರತೀಯರಾದ ಎಲ್ಲರಿಗೂ ಬದುಕಿ ಬಾಳುವ ಹಕ್ಕಿದೆ. ಬರೀ ಓಟು ಕೊಟ್ಟರೆ ಸಾಲದು ಊಟ ಕೊಡಬೇಕು, ಉದ್ಯೋಗ ಕೊಡಬೇಕು, ನೆಲೆ ಮತ್ತು ನೆಲ ಕೊಡಬೇಕು ಎಂದು ಒತ್ತಾಯಿಸಿದರು.

ಈ ಜನರನ್ನು ಕರಿಬೇವಿನ ಸೊಪ್ಪಿನಂತೆ ಬಳಸಬಾರದು. ರಸ ಬಿಟ್ಟು ಮೇಲೆ ಅದನ್ನು ಎಸೆಯುವಂತೆ ಜನರನ್ನು ಬಳಸಿ ಬೀದಿಗೆ ಎಸೆಯುವಂತೆ ಕಾಣುತ್ತಿದೆ ಈ ದೇಶ. ಜನರನ್ನು ಮರ್ಯಾದೆಯಿಂದ ನಡೆಸಿಕೊಳ್ಳುವುದನ್ನು ಮೊದಲು ಸರ್ಕಾರಗಳು, ಜನಪ್ರತಿನಿಧಿಗಳು ಕಲಿಯಬೇಕು. ಪೊಲೀಸರು, ಅಧಿಕಾರಿಗಳು, ಮಂತ್ರಿಗಳು, ಜಿಲ್ಲಾಧಿಕಾರಿ ಎಲ್ಲರೂ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಈ ಜನ ನಿಮಗೆ ಓಟು ಕೊಡೋರು. ಅಧಿಕಾರದಲ್ಲಿ ಕೂರಿಸೋರು. ಇವರನ್ನು ನೀವು ನಿರ್ಲಕ್ಷ್ಯ ಮಾಡ್ತೀರಾ? ಕಸದ ಕಡ್ಡಿಯಂತೆ ಕಾಣ್ತೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಷ್ಟು ದಿನ ಹಸಿದುಕೊಂಡಿರಬೇಕು. ಎಷ್ಟು ದಿನ ಬೀದಿಯಲ್ಲಿರಬೇಕು. ಮನೆ ನೀಡುವುದು, ಭೂಮಿ ನೀಡುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಇಲ್ಲಿದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನ ದಿಡ್ಡಹಳ್ಳಿಯಲ್ಲಿ ನೂರಾರು ಕುಟಂಬಗಳನ್ನು ಒಕ್ಕಲೆಬ್ಬಿಸಿದರು. ನಾವು ಹೋರಾಟ ಮಾಡಿದೆವು. ಪರಿಣಾಮ ಅವರಿಗೆ ಮನೆಗಳನ್ನು ನೀಡಲು ಸಿದ್ದತೆ ನಡೆದಿದೆ. ಮನೆ, ಭೂಮಿ ಪಡೆಯುವುದು ನಮ್ಮ ಹಕ್ಕು. ಸರ್ಕಾರವನ್ನು ಯಾರಿಗೋಸ್ಕರ ನಡೆಸುತ್ತೀರಿ. ಶ್ರೀಮಂತರಿಗಾಗಿ ನಡೆಸುತ್ತೀರಾ? ಬಡವರು ಬದುಕಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ವಂಚನೆ ಮಾಡೋರು ಪ್ರತಿನಿಧಿಗಳೇನ್ರಿ? ಅಯೋಗ್ಯರು ಅವರು. ಇಂಥವರು ನಮ್ಮ ಪ್ರತಿನಿಧಿಗಳಾ? ಒಂದು ತತ್ವಕ್ಕೆ ಬದ್ದರಾಗಲ್ಲ, ಒಂದು ಪಕ್ಷಕ್ಕೆ ಬದ್ದರಾಗಲ್ಲ, ವಿಚಾರಕ್ಕೆ ಬದ್ದರಾಗಿಲ್ಲ. ಮರ್ಯಾದೆ ಇಲ್ಲ ಇವರಿಗೆ. ಕಳಚಿಕೊಂಡು ಹೋಗುತ್ತಿರುತ್ತಾರೆ. ಇದೇನ್ರಿ ಇದು? ಇಂಥಾ ಅನ್ಯಾಯ ನಡೆಯುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರ್ತಿರಲ್ಲಾ ನೀವು ಯುವಕರು. ಇದಕ್ಕೇನಾ ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದು? ಲೂಟಿ ಮಾಡುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಲಕ್ಷಾಧಿಪತಿಗೆ ಜೈ ಅನ್ನುತ್ತೀರಾ? ಅವನು ಕೊಟ್ಟ ಹೆಂಡ, ಅವನು ಕೊಟ್ಟ ಖಂಡ ತಿಂದು ಜೈ ಅನ್ನೋದೇ ನಿಮ್ಮ ಬದುಕಾಗಿದೆಯೇ? ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಮರ್ಯಾದೆ ಇಲ್ಲದ ರಾಜಕೀಯ ಪಕ್ಷಗಳನ್ನು ನೋಡಿದ್ರೆ ಬೇಸರವಾಗುತ್ತೇ. ರಾಜಕೀಯ ಹೊಲಸೆದ್ದು ಹೊಗಿದೆ. ಸಿಕ್ಕಿದ್ದನ್ನು ಲೂಟಿ ಮಾಡಿಕೊಂಡು ಹೋಗಬಹುದು ಎಂದು ತಿಳಿದುಕೊಂಡಿದ್ದಾರೆ. ಪಿತೂರಿ ಮಾಡಿ ಇನ್ನೊಂದು ಪಕ್ಷವನ್ನು ಧ್ವಂಸ ಮಾಡಬೇಕೆಂದು ಚಿಂತನೆ ನಡೆಸುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಆಟ ಅನ್ನುತ್ತಾರೆ. ಆಟ ಆಡಬೇಕೆಂದರೆ ನೀವು ಮನೆಗೆ ಹೋಗಿ ಎಂದು ಕಿಡಿಕಾರಿದರು.

ಹಳ್ಳಿಗಳಲ್ಲಿ ಬಡವರು, ಆದಿವಾಸಿಗಳು, ದಲಿತರು ಸರ್ಕಾರಿ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡುವಂತೆ ಕೇಳುತ್ತಿದ್ದಾರೆ. ಸಮಸ್ಯೆ ತೀವ್ರವಾಗಿದೆ. ಆದರೂ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ ಮೂರು ವರ್ಷಗಳಿಂದಲೂ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟ ಮಾಡುತ್ತಲೇ ಬರುತ್ತಿದೆ ಎಂದು ಸಿರಿಮನೆ ನಾಗರಾಜ್ ಹೇಳಿದರು.

ಜಮೀನು ಇಲ್ಲದವರಿಗೆ, ಮನೆ ಇಲ್ಲದವರಿಗೆ ಭೂಮಿ ಮತ್ತು ಮನೆ ಕೊಡಬೇಕು. ಅಧಿಕಾರಿಗಳಲ್ಲಿ, ಜನಪ್ರತಿನಿಧಿಗಳಲ್ಲಿ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಆರು ಸುತ್ತಿನ ಹೋರಾರ ನಡೆದರೂ  ಕಿಮ್ಮತ್ತು ನೀಡುತ್ತಿಲ್ಲ. ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೋರಾಟಗಳನ್ನು ಮಾಡಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೇವೆ.  ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದೆ. ಭೂಮಿ ಮತ್ತು ಮನೆ ಒದಗಿಸುವ ಭರವಸೆಯನ್ನು ಜಗದೀಶ್ ಶೆಟ್ಟರ್ ನೀಡಿದ್ದರು. ಆದರೆ ಆಗಿರುವ ಕೆಲಸಗಳು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಲೇ ಇದೆ. ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೋರಾಟ ನಡೆಸಿದ ಭಾಗವಾಗಿ ಎರಡು ವರ್ಷಗಳಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ, ಆದರೆ ಅಧಿಕಾರಿಗಳ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...