Homeಕರ್ನಾಟಕಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ...

ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

- Advertisement -
- Advertisement -

ನೀಡಿದ ಭರವಸೆಗಳೆಲ್ಲವೂ ಸುಳ್ಳಾದವು. ಬಡಜನರಿಗೆ ಭೂಮಿ ಮತ್ತು ಮನೆಗಳನ್ನು ನೀಡುವಂತೆ ಒತ್ತಾಯಿಸಿ ಹಲವು ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್‌.ಎಸ್‌ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ಮತ್ತು ಭೂಮಿ ಇಲ್ಲದವರಿಗೆ ಭೂಮಿ, ಮನೆಯಿಲ್ಲದವರಿಗೆ ಮನೆಗಳನ್ನು ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭವಾಗಿದೆ.

ಮಧುಗಿರಿ ತಾಲೂಕಿನ ಬ್ಯಾಲ್ಯ, ಕೊಡಿಗೇನಹಳ್ಳಿ ಮತ್ತು ಶಿರಾ ತಾಲೂಕಿನಿಂದ ಆಗಮಿಸಿದ್ದ 100 ಹೆಚ್ಚು ಮಂದಿ ಭೂರಹಿತರು, ಮನೆ ಇಲ್ಲದ ಬಡವರು ವಾಸಕ್ಕೆ ಮನೆ ಉಳುಮೆ ಮಾಡಲು ಒಂದಿಷ್ಟು ಭೂಮಿ ನೀಡುವಂತೆ ಒತ್ತಾಯಿಸಿದರು. ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಹೋರಾತ್ರಿ ಧರಣಿಗೆ ಚಾಲನೆ ನೀಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಭಾರತೀಯರಾದ ಎಲ್ಲರಿಗೂ ಬದುಕಿ ಬಾಳುವ ಹಕ್ಕಿದೆ. ಬರೀ ಓಟು ಕೊಟ್ಟರೆ ಸಾಲದು ಊಟ ಕೊಡಬೇಕು, ಉದ್ಯೋಗ ಕೊಡಬೇಕು, ನೆಲೆ ಮತ್ತು ನೆಲ ಕೊಡಬೇಕು ಎಂದು ಒತ್ತಾಯಿಸಿದರು.

ಈ ಜನರನ್ನು ಕರಿಬೇವಿನ ಸೊಪ್ಪಿನಂತೆ ಬಳಸಬಾರದು. ರಸ ಬಿಟ್ಟು ಮೇಲೆ ಅದನ್ನು ಎಸೆಯುವಂತೆ ಜನರನ್ನು ಬಳಸಿ ಬೀದಿಗೆ ಎಸೆಯುವಂತೆ ಕಾಣುತ್ತಿದೆ ಈ ದೇಶ. ಜನರನ್ನು ಮರ್ಯಾದೆಯಿಂದ ನಡೆಸಿಕೊಳ್ಳುವುದನ್ನು ಮೊದಲು ಸರ್ಕಾರಗಳು, ಜನಪ್ರತಿನಿಧಿಗಳು ಕಲಿಯಬೇಕು. ಪೊಲೀಸರು, ಅಧಿಕಾರಿಗಳು, ಮಂತ್ರಿಗಳು, ಜಿಲ್ಲಾಧಿಕಾರಿ ಎಲ್ಲರೂ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಈ ಜನ ನಿಮಗೆ ಓಟು ಕೊಡೋರು. ಅಧಿಕಾರದಲ್ಲಿ ಕೂರಿಸೋರು. ಇವರನ್ನು ನೀವು ನಿರ್ಲಕ್ಷ್ಯ ಮಾಡ್ತೀರಾ? ಕಸದ ಕಡ್ಡಿಯಂತೆ ಕಾಣ್ತೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಷ್ಟು ದಿನ ಹಸಿದುಕೊಂಡಿರಬೇಕು. ಎಷ್ಟು ದಿನ ಬೀದಿಯಲ್ಲಿರಬೇಕು. ಮನೆ ನೀಡುವುದು, ಭೂಮಿ ನೀಡುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಇಲ್ಲಿದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನ ದಿಡ್ಡಹಳ್ಳಿಯಲ್ಲಿ ನೂರಾರು ಕುಟಂಬಗಳನ್ನು ಒಕ್ಕಲೆಬ್ಬಿಸಿದರು. ನಾವು ಹೋರಾಟ ಮಾಡಿದೆವು. ಪರಿಣಾಮ ಅವರಿಗೆ ಮನೆಗಳನ್ನು ನೀಡಲು ಸಿದ್ದತೆ ನಡೆದಿದೆ. ಮನೆ, ಭೂಮಿ ಪಡೆಯುವುದು ನಮ್ಮ ಹಕ್ಕು. ಸರ್ಕಾರವನ್ನು ಯಾರಿಗೋಸ್ಕರ ನಡೆಸುತ್ತೀರಿ. ಶ್ರೀಮಂತರಿಗಾಗಿ ನಡೆಸುತ್ತೀರಾ? ಬಡವರು ಬದುಕಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ವಂಚನೆ ಮಾಡೋರು ಪ್ರತಿನಿಧಿಗಳೇನ್ರಿ? ಅಯೋಗ್ಯರು ಅವರು. ಇಂಥವರು ನಮ್ಮ ಪ್ರತಿನಿಧಿಗಳಾ? ಒಂದು ತತ್ವಕ್ಕೆ ಬದ್ದರಾಗಲ್ಲ, ಒಂದು ಪಕ್ಷಕ್ಕೆ ಬದ್ದರಾಗಲ್ಲ, ವಿಚಾರಕ್ಕೆ ಬದ್ದರಾಗಿಲ್ಲ. ಮರ್ಯಾದೆ ಇಲ್ಲ ಇವರಿಗೆ. ಕಳಚಿಕೊಂಡು ಹೋಗುತ್ತಿರುತ್ತಾರೆ. ಇದೇನ್ರಿ ಇದು? ಇಂಥಾ ಅನ್ಯಾಯ ನಡೆಯುತ್ತಿದೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರ್ತಿರಲ್ಲಾ ನೀವು ಯುವಕರು. ಇದಕ್ಕೇನಾ ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದು? ಲೂಟಿ ಮಾಡುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಲಕ್ಷಾಧಿಪತಿಗೆ ಜೈ ಅನ್ನುತ್ತೀರಾ? ಅವನು ಕೊಟ್ಟ ಹೆಂಡ, ಅವನು ಕೊಟ್ಟ ಖಂಡ ತಿಂದು ಜೈ ಅನ್ನೋದೇ ನಿಮ್ಮ ಬದುಕಾಗಿದೆಯೇ? ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಮರ್ಯಾದೆ ಇಲ್ಲದ ರಾಜಕೀಯ ಪಕ್ಷಗಳನ್ನು ನೋಡಿದ್ರೆ ಬೇಸರವಾಗುತ್ತೇ. ರಾಜಕೀಯ ಹೊಲಸೆದ್ದು ಹೊಗಿದೆ. ಸಿಕ್ಕಿದ್ದನ್ನು ಲೂಟಿ ಮಾಡಿಕೊಂಡು ಹೋಗಬಹುದು ಎಂದು ತಿಳಿದುಕೊಂಡಿದ್ದಾರೆ. ಪಿತೂರಿ ಮಾಡಿ ಇನ್ನೊಂದು ಪಕ್ಷವನ್ನು ಧ್ವಂಸ ಮಾಡಬೇಕೆಂದು ಚಿಂತನೆ ನಡೆಸುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಆಟ ಅನ್ನುತ್ತಾರೆ. ಆಟ ಆಡಬೇಕೆಂದರೆ ನೀವು ಮನೆಗೆ ಹೋಗಿ ಎಂದು ಕಿಡಿಕಾರಿದರು.

ಹಳ್ಳಿಗಳಲ್ಲಿ ಬಡವರು, ಆದಿವಾಸಿಗಳು, ದಲಿತರು ಸರ್ಕಾರಿ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡುವಂತೆ ಕೇಳುತ್ತಿದ್ದಾರೆ. ಸಮಸ್ಯೆ ತೀವ್ರವಾಗಿದೆ. ಆದರೂ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ ಮೂರು ವರ್ಷಗಳಿಂದಲೂ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟ ಮಾಡುತ್ತಲೇ ಬರುತ್ತಿದೆ ಎಂದು ಸಿರಿಮನೆ ನಾಗರಾಜ್ ಹೇಳಿದರು.

ಜಮೀನು ಇಲ್ಲದವರಿಗೆ, ಮನೆ ಇಲ್ಲದವರಿಗೆ ಭೂಮಿ ಮತ್ತು ಮನೆ ಕೊಡಬೇಕು. ಅಧಿಕಾರಿಗಳಲ್ಲಿ, ಜನಪ್ರತಿನಿಧಿಗಳಲ್ಲಿ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಆರು ಸುತ್ತಿನ ಹೋರಾರ ನಡೆದರೂ  ಕಿಮ್ಮತ್ತು ನೀಡುತ್ತಿಲ್ಲ. ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೋರಾಟಗಳನ್ನು ಮಾಡಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುತ್ತಿದ್ದೇವೆ.  ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದೆ. ಭೂಮಿ ಮತ್ತು ಮನೆ ಒದಗಿಸುವ ಭರವಸೆಯನ್ನು ಜಗದೀಶ್ ಶೆಟ್ಟರ್ ನೀಡಿದ್ದರು. ಆದರೆ ಆಗಿರುವ ಕೆಲಸಗಳು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಲೇ ಇದೆ. ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೋರಾಟ ನಡೆಸಿದ ಭಾಗವಾಗಿ ಎರಡು ವರ್ಷಗಳಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ, ಆದರೆ ಅಧಿಕಾರಿಗಳ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...