Homeಮುಖಪುಟಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

ಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಮಾತನಾಡಿರುವ ಕುಸ್ತಿಪಟು ಬಜರಂಗ್ ಪುನಿಯಾ, ಅಮಿತ್ ಶಾ ಅವರೊಂದಿಗೆ ಗ್ರಾಪ್ಲರ್‌ಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಪುನಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಸೋಮವಾರ ರಾತ್ರಿ 11 ಗಂಟೆಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಸಭೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ.

ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದರು. ”ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ” ಎಂದು ಅವರು ಕುಸ್ತಿಪಟುಗಳಿಗೆ ಹೇಳಿದರು. ಅವರು (ಶಾ) ಕ್ರಮ ತಗೆದುಕೊಳ್ಳುವ ಬಗ್ಗೆ ಚರ್ಚಿಸುತ್ತಿದ್ದಾರೆ. ಹಾಗಂತ ಅವರು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವ ಭರವಸೆಗಳ ಆಧಾರದ ಮೇಲೆ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದರು.

”ಸರ್ಕಾರದ ಭರವಸೆಗಳ ಆಧಾರದ ಮೇಲೆ ನಾವು ಜನವರಿಯಲ್ಲಿ ಹಿಂತಿರುಗಿದ್ದೇವೆ, ಆದರೆ ನಂತರ ಸುಳ್ಳುಗಾರರು ಎಂದು ಘೋಷಿಸಲಾಯಿತು” ಎಂದು ಪುನಿಯಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...