Homeಮುಖಪುಟಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

ಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಮಾತನಾಡಿರುವ ಕುಸ್ತಿಪಟು ಬಜರಂಗ್ ಪುನಿಯಾ, ಅಮಿತ್ ಶಾ ಅವರೊಂದಿಗೆ ಗ್ರಾಪ್ಲರ್‌ಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಪುನಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಸೋಮವಾರ ರಾತ್ರಿ 11 ಗಂಟೆಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಸಭೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ.

ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದರು. ”ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ” ಎಂದು ಅವರು ಕುಸ್ತಿಪಟುಗಳಿಗೆ ಹೇಳಿದರು. ಅವರು (ಶಾ) ಕ್ರಮ ತಗೆದುಕೊಳ್ಳುವ ಬಗ್ಗೆ ಚರ್ಚಿಸುತ್ತಿದ್ದಾರೆ. ಹಾಗಂತ ಅವರು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವ ಭರವಸೆಗಳ ಆಧಾರದ ಮೇಲೆ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದರು.

”ಸರ್ಕಾರದ ಭರವಸೆಗಳ ಆಧಾರದ ಮೇಲೆ ನಾವು ಜನವರಿಯಲ್ಲಿ ಹಿಂತಿರುಗಿದ್ದೇವೆ, ಆದರೆ ನಂತರ ಸುಳ್ಳುಗಾರರು ಎಂದು ಘೋಷಿಸಲಾಯಿತು” ಎಂದು ಪುನಿಯಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...