Homeಕರ್ನಾಟಕ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿದ ಸಂದರ್ಭದಲ್ಲಿ ಅವರು ಮಾತನಾಡಿದರು. 

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಸಿಎಲ್ ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು. 

ಡಿ.ಕೆ.ಶಿವಕುಮಾರ್ ಅವರ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8, ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ. ವರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು, ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು, ಪಶು-ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ

ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು-ಆಹಾರ 4-5 ಲಕ್ಷ ಟನ್  ಹಾಗೂ 7-10 ಲಕ್ಷದ ಎಥೆನಾಲ್ ಗಾಗಿ ಬಳಸುತ್ತಾರೆ.  ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥೆನಾಲ್ ಹಾಗೂ ಎಂ.ಎಸ್.ಪಿ, ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು,  ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು. 

ಈ ವೇಳೆ ಹೈ ಕಮಾಂಡ್ ಭೇಟಿ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಮಯ ಸಿಕ್ಕು, ಭೇಟಿಗೆ ಅವಕಾಶ ನೀಡಿದಾಗ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...