Homeಕರ್ನಾಟಕ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿದ ಸಂದರ್ಭದಲ್ಲಿ ಅವರು ಮಾತನಾಡಿದರು. 

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಸಿಎಲ್ ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು. 

ಡಿ.ಕೆ.ಶಿವಕುಮಾರ್ ಅವರ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8, ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ. ವರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು, ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು, ಪಶು-ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ

ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು-ಆಹಾರ 4-5 ಲಕ್ಷ ಟನ್  ಹಾಗೂ 7-10 ಲಕ್ಷದ ಎಥೆನಾಲ್ ಗಾಗಿ ಬಳಸುತ್ತಾರೆ.  ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥೆನಾಲ್ ಹಾಗೂ ಎಂ.ಎಸ್.ಪಿ, ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು,  ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು. 

ಈ ವೇಳೆ ಹೈ ಕಮಾಂಡ್ ಭೇಟಿ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಮಯ ಸಿಕ್ಕು, ಭೇಟಿಗೆ ಅವಕಾಶ ನೀಡಿದಾಗ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...