Homeಕರ್ನಾಟಕ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿದ ಸಂದರ್ಭದಲ್ಲಿ ಅವರು ಮಾತನಾಡಿದರು. 

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಸಿಎಲ್ ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು. 

ಡಿ.ಕೆ.ಶಿವಕುಮಾರ್ ಅವರ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8, ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ. ವರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು, ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು, ಪಶು-ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ

ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು-ಆಹಾರ 4-5 ಲಕ್ಷ ಟನ್  ಹಾಗೂ 7-10 ಲಕ್ಷದ ಎಥೆನಾಲ್ ಗಾಗಿ ಬಳಸುತ್ತಾರೆ.  ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥೆನಾಲ್ ಹಾಗೂ ಎಂ.ಎಸ್.ಪಿ, ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು,  ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು. 

ಈ ವೇಳೆ ಹೈ ಕಮಾಂಡ್ ಭೇಟಿ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಮಯ ಸಿಕ್ಕು, ಭೇಟಿಗೆ ಅವಕಾಶ ನೀಡಿದಾಗ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...