Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...