Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...