Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...