Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...