Homeಕರ್ನಾಟಕಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

ಜನರನ್ನು ಸಜ್ಜುಗೊಳಿಸುವಲ್ಲಿ ನಮ್ಮಲ್ಲೇ ಲೋಪವಿದೆ: ನೂರ್ ಶ್ರೀಧರ್

- Advertisement -
- Advertisement -

ನಾವು ಪ್ರಚಂಡ ಚಳವಳಿಯನ್ನು ಕಟ್ಟುವ ಅಗತ್ಯವಿದೆ, ಆದರೆ ಅಗುತ್ತಿಲ್ಲ. ಯುವ ಜನರನ್ನು ಸಜ್ಜುಗೊಳಿಸಬೇಕಿದೆ, ಸಾಧ್ಯವಾಗುತ್ತಿಲ್ಲ. ಬೃಹತ್ ಜನಾಂದೋಲನ ಕಟ್ಟಬೇಕಿದೆ, ಅದೂ ಆಗುತ್ತಿಲ್ಲ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮಲ್ಲೆ ಇರುವ ಲೋಪವಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಮಾತನಾಡಿದ ಅವರು, “ನಾವು ಅನೇಕ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ, ಆಳುವವರನ್ನು ಅಲುಗಾಡಿಸಲು ಅಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಲೋಪ ನಮ್ಮಲ್ಲೇ ಇದೆ. ಅದನ್ನೆಲ್ಲ ಮೀರುವುದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಲಾಗಿದೆ” ಎಂದರು.

ನಾಡೋಜ ಬರಗೂರು ರಾಮಚಂದ್ರಪ್ಪನವರು ಮಾತನಾಡುತ್ತಾ ನಾವು ಆಳುವವರನ್ನು ಪ್ರಶ್ನಿಸಬೇಕು, ಅದಕ್ಕೂ ಮುನ್ನ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು. ಅದನ್ನು ನಾನು ಒಪ್ಪುತ್ತೇನೆ. ನಮ್ಮಲ್ಲಿ ಒಂದು ರೀತಿಯ ತೊಳಲಾಟವಿದೆ. ಅದನ್ನು ಮೀರಬೇಕು ಎಂದು ಹೇಳಿದರು.

ಕಳೆದ ಎರಡು ಚುನಾವಣೆಗಳಲ್ಲಿ ಕೆಲಸ ಮಾಡಿದ ಎದ್ದೇಳು ಕರ್ನಾಟಕದ ಮುಂದಿನ ಕಾರ್ಯಚಟುವಟಿಕೆಯೇನು ಎಂಬ ಪ್ರಶ್ನೆ ಮುಂದೆ ಬಂದಾಗ 24 ರಾಜ್ಯಗಳ ಹಲವರು ಸೇರಿ ಜು.27,28ರಂದು ಎರಡು ದಿನದ ಕಾರ್ಯಗಾರವನ್ನು ನಡೆಸಲಾಯಿತು. ಅಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಅದರ ಭಾಗವಾಗಿ ಈ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ತೀರ್ಮಾನ ಮಾಡಲಾಯಿತು. ಕಳೆದ 4 ತಿಂಗಳಿನಿಂದ ಈ ಪಡೆ ಕಟ್ಟಿ, ಸಮಾವೇಶ ನಡೆಸುವ ತಯಾರಿ ನಡೆದಿದೆ. ಇದರಲ್ಲಿ ಏನೊ ಸತ್ವವಿದೆ ಎಂದು ನಮಗೆ ಅನಿಸಿದೆ ಎಂದು ತಿಳಿಸಿದರು.

ಈ ಸಂವಿಧಾನ ಸಂರಕ್ಷಕರ ಪಡೆಯನ್ನು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಕಟ್ಟಬೇಕಿದೆ. ನಾವು ಹೇಳುವ ವಿಚಾರಗಳು ಜನರಿಗೆ ತಲುಪಬೇಕಾದರೆ ಕಾರ್ಯಕರ್ತರ ಗಣ ಕಟ್ಟಲೇಬೇಕು. ನಾವು ಉದ್ದೇಶಿಸಿರುವ 1 ಲಕ್ಷ ಸಂರಕ್ಷಕರ ಪಡೆ ಕಟ್ಟುವ ಉದ್ದೇಶ ಯಶಸ್ಸು ಆಗಬೇಕಾದರೆ ಇಲ್ಲಿನ ವೇದಿಕೆಯ ಮೇಲಿರುವ ಗಣ್ಯರು ಮತ್ತು ಸಭೆಯ ಮುಂದಿರುವ ನಿಮ್ಮೆಲ್ಲರ ಜವಾಬ್ದಾರಿ ಇದೆ. ಅದನ್ನು ಒಟ್ಟಿಗೆ ಸೇರಿ ನಿರ್ವಹಿಸಬೇಕಿದೆ. ಎಲ್ಲರೂ ಸೇರಿ ದೃಢ ನಿರ್ಧಾರ ಮಾಡಬೇಕಿದೆ. ಪ್ರತಿಯೊಬ್ಬರು ಯೋಧರಂತೆ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ಜೊತೆ 5 ಜನ ಸಂವಿಧಾನ ಸಂರಕ್ಷಕರನ್ನು ತಯಾರು ಮಾಡುವ ತೀರ್ಮಾನ ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ. ಇದು ಆದರೆ ಮುಂದಿನ 3 ವರ್ಷದಲ್ಲಿ 1 ಲಕ್ಷ ಪಡೆ ಕಟ್ಟುವ ನಮ್ಮ ಗುರಿಯನ್ನು ಮುಟ್ಟಬಹುದು ಎಂದು ನೂರ್ ಆಶಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಂಘಟನೆಗಳ ನಾಯಕರ ಮಟ್ಟದಲ್ಲಿ ಒಳ್ಳೆಯ ವಾತಾವರಣವಿದೆ. ಆದರೆ, ಕೆಳಮಟ್ಟದಲ್ಲಿ  ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ.  ತಳಮಟ್ಟದಲ್ಲಿ ಅಂದರೆ, ಜನಸಾಮಾನ್ಯರ ಮಧ್ಯೆ ಕೆಲಸ ಮಾಡಬೇಕಿದೆ. ಇದಕ್ಕಾಗಿ 100 ಜನ ಶಿಕ್ಷಕರನ್ನು ಸಿದ್ದಗೊಳಿಸಲಾಗಿದೆ. ಬರುವ ಜುಲೈನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಬಿರ ನಡೆಸಲು ಸಿದ್ಧತೆಗಾಗಿ ಪಠ್ಯ ಪುಸ್ತಕಗಳು ರೂಪಿಸಲಾಗಿದೆ. ಈ ಮೂಲಕ ಒಂದು ಗಟ್ಟಿ ತಂಡವನ್ನು ಕಟ್ಟಲು ಸಾಧ್ಯವಾಗುತ್ತದೆ. ಮತ್ತೊಂದು ಕಡೆ ಜನಸಾಮಾನ್ಯರನ್ನು ತಲುಪಲು ಎರಡು ಕೆಲಸ ಮಾಡಬೇಕಿದೆ. ಒಂದು ಜನ ಸಾಂಸ್ಕೃತಿಕ ತಂಡ ಇನ್ನೊಂದು ಜನ ಮಾಧ್ಯಮಗಳನ್ನು ಬಲಪಡಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ನಾಲ್ಕು ಮುಖ್ಯ ಚಟುವಟಿಕೆಗಳ ಕುರಿತು ನಿಮ್ಮ ಮುಂದಿಡುತ್ತಿದ್ದೇವೆ. ಸಮಾಜದ ಎಲ್ಲ ಕಡೆ ವಿಷ ಹರಡಿದೆ. ಒಂದು ಕಡೆ ಕೇಂದ್ರದ ಜೊತೆ ಗುದ್ದಾಟ ನಡೆಸಬೇಕಿದೆ. ಅದರ ಜೊತೆಗೆ ನಮ್ಮ ರಾಜ್ಯದ ಸರಕಾರದ ವಿರುದ್ದ ಗುದ್ದಾಟ ನಡೆಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ನಮ್ಮೆಲ್ಲರ ಆಸೆಯನ್ನು ನಿರಾಶೆಗೊಳಿಸಿದೆ. ತಮ್ಮ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುತ್ತಿಲ್ಲ. ತಮ್ಮ ಪಕ್ಷದ ಜನಪ್ರತಿನಿಧಿಗಳು ಸ್ವಜನಪಕ್ಷಪಾತಿಗಳಾಗಿದ್ದಾರೆ. ಭ್ರಷ್ಟರಾಗಿದ್ದಾರೆ. ಇದಕ್ಕಾಗಿ ನಾವೆಲ್ಲ ಈ ರಾಜ್ಯ ಸರಕಾರವನ್ನು ಚುಚ್ಚಬೇಕಾಗಿದೆ ಎಂದರು.

ಇದೇ ಮೇ 20ರಂದು ಕಾರ್ಮಿಕ, ರೈತ ಸಂಘಟನೆಗಳು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿವೆ. ಅದರಲ್ಲಿ ನಾವೆಲ್ಲ ಸಕ್ರಿಯವಾಗಿ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಭಾಗವಹಿಸಬೇಕಿದೆ. ಅದಕ್ಕಾಗಿ ಸಂಯುಕ್ತ ಹೋರಾಟ ವತಿಯಿಂದ ರಾಜ್ಯದ ಆಯ್ದ 100 ಅಯಕಟ್ಟಿನ ಪ್ರದೇಶಗಳಲ್ಲಿ ಸರಕಾರವನ್ನು ನಡುಗಿಸುವ ಹೋರಾಟವನ್ನು ಕಟ್ಟಬೇಕಿದೆ. ಅದರಲ್ಲಿ ಎದ್ದೇಳು ಕರ್ನಾಟಕ ಸಕ್ರಿಯ ಭಾಗವಹಿಸಬೇಕು ಎಂದು ಕರೆ ಕೊಡುತ್ತಿದ್ದೇವೆ. ಜನ ಪ್ರತಿನಿಧಿಗಳ ಕೆಲಸ ಕಾರ್ಯಗಳ ಕುರಿತು ರಿಪೋರ್ಟ್ ಕಾರ್ಡ್ ಅನ್ನು ತಯಾರಿಸಿ ಸರ್ಕಾರದ ಮುಂದಿಡಬೇಕಿದೆ. ಧರ್ಮಾಂಧ ಶಕ್ತಿಗಳನ್ನು ಸೋಲಿಸದೆ ಜನಸಾಮಾನ್ಯರ ಸಂಕಷ್ಟಗಳಿಗೆ ಮುಕ್ತಿಯಿಲ್ಲವಾಗಿದೆ. ಅದಕ್ಕಾಗಿ ಕೆಲವು ತಿಂಗಳೊಳಗೆ ಇಲ್ಲವೆ ವರ್ಷದೊಳಗೆ ರಾಷ್ಟ್ರೀಯ ಜನಾಂದೋಲನ ಕಟ್ಟಲು ಒಂದು ರಾಷ್ಟ್ರೀಯ ಸಮಾವೇಶ ನಡೆಸಲು ಸಿದ್ದತೆ ಮಾಡಿಕೊಳ್ಳಲು ಸಿದ್ಧತೆಯನ್ನು ಅದಷ್ಟು ತೀವ್ರಗೊಳಿಸಬೇಕು ಎಂದು ನೂರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...