Homeಕರ್ನಾಟಕ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

- Advertisement -
- Advertisement -

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ)ವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಖ್ಯಾತ ಇಂಗ್ಲಿಷ್ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸದಿದ್ದರೆ, ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಚ ನೀಡಲಾಗುತ್ತಿದೆ ಎಂಬುವುದನ್ನು ನಿರೂಪಿಸಲು ನಮ್ಮ ಬಳಿ ದಾಖಲೆಗಳಿವೆ. ಆದರೆ ಸಂತೋಷ್ ಪಾಟೀಲ್ ನಿಧನದ ನಂತರ ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಪಡಿಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಈ ವಿವಾದದ ಬಿಂದುವಾಗಿದ್ದ ಸಚಿವರನ್ನೂ ಬಂಧಿಸಿರಲಿಲ್ಲ. ಇದು ಏನು ತೋರಿಸುತ್ತದೆ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ.

ಬಾಕಿ ಇರುವ ಬಿಲ್‌ಗಳನ್ನು ಕ್ಲಿಯರ್ ಮಾಡಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಗುತ್ತಿಗೆದಾದ ಸಂತೋಷ್ ಪಾಟೀಲ್ ಅವರು 2022ರ ಏಪ್ರಿಲ್‌ನಲ್ಲಿ ಉಡುಪಿಯ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಂಜುನಾಥ್ ಅವರು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಪತ್ರಿಕಾಗೋಷ್ಠಿಯಲ್ಲಿ ಪ್ಲೇ ಮಾಡಿದ್ದರು. ಈ ಸಂಭಾಷಣೆಯಲ್ಲಿ, ಮಂಜುನಾಥ್ ಅವರ ಧ್ವನಿಯು ಕೇಳಿಸುತ್ತದೆ,“(ಗುತ್ತಿಗೆ ಕಾಮಗಾರಿ) ಬಿಲ್ ಮಾಡಬೇಡಿ ಎಂದು ನೀವು ಹೇಗೆ ಹೇಳುತ್ತೀರಿ? ಅದು ತಪ್ಪಲ್ಲವೆ.(ಉಳಿದ ಲಂಚದ ಮೊತ್ತ) ನಾನು ನಿಮಗೆ ನೀಡುತ್ತೇನೆ… 5 ರಿಂದ 6 ಕೋಟಿ ರೂ. ಬಾಕಿ ಇವೆ. ನಾನು ಹೇಗೆ ಜೀವನ ನಡೆಸುವುದು?” ಎಂದು ಕೇಳಿದ್ದರು.

“ಶಾಸಕ ಲಂಚ ಕೇಳಿದ್ದಕ್ಕೆ ನನ್ನ ಬಳಿ ಆಡಿಯೋ ಕ್ಲಿಪ್‌ಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಮತ್ತು ಇತರ ದಾಖಲೆಗಳಿವೆ. ಹಾಗಾಗಿ ಇದನ್ನು ಮಾಧ್ಯಮಗಳ ಮುಂದೆ ಇಡಲು ಬಯಸಿದ್ದೇನೆ. ಇತರ ಗುತ್ತಿಗೆದಾರರಿಗೆ ಮಾದರಿಯಾಗಲು ಬೇಕಾಗಿ ನಾನು ಮುಂದೆ ನಿಂತಿದ್ದೇನೆ. 2019 ರಿಂದ ಹಿರಿಯ ಶಾಸಕರೊಬ್ಬರಿಗೆ ನಾನು ಹಣ ಕೊಡಬೇಕಾಗಿತ್ತು” ಎಂದು ಮಂಜುನಾಥ್ ತಿಳಿಸಿದ್ದಾರೆ.

“2019 ರಲ್ಲಿ ನಾನು PWD ಕಚೇರಿಯನ್ನು ನಿರ್ಮಿಸಿದೆ. ಆದರೆ ಅದರ ಬಿಲ್ ಇನ್ನೂ ಕ್ಲಿಯರ್ ಆಗಿಲ್ಲ. ನಾನು ಚಿತ್ರದುರ್ಗದಲ್ಲಿ ವಿಭಾಗ ಕಚೇರಿಯನ್ನು ನಿರ್ಮಿಸಿದ್ದೇನೆ, ಅದಕ್ಕೂ 5% ಕ್ಕಿಂತ ಹೆಚ್ಚು ಲಂಚ ನೀಡಬೇಕಾಗಿತ್ತು. ಮೊದಲ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ, ನಾನು 250 ಹಾಸಿಗೆಗಳ ಆಸ್ಪತ್ರೆಗಾಗಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ (MGS) ವ್ಯವಸ್ಥೆಯನ್ನು ನಿರ್ಮಿಸಿದೆ. ಇದು 12 ಕೋಟಿ ರೂಪಾಯಿ ಮೌಲ್ಯದ ಯೋಜನೆಯಾಗಿದ್ದು, ಇದಕ್ಕಾಗಿ ನಾನು 12.5 ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು” ಎಂದು ಅವರು ಹೇಳಿದ್ದಾರೆ.

ಸುಮಾರು 25,000 ಕೋಟಿ ಮೌಲ್ಯದ ಬಿಲ್‌ಗಳು ಸರ್ಕಾರದ ಬಳಿ ಬಾಕಿ ಇವೆ ಎಂದು ಸಂಘದ ಸದಸ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...