Homeಕರ್ನಾಟಕ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

- Advertisement -
- Advertisement -

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ)ವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಖ್ಯಾತ ಇಂಗ್ಲಿಷ್ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸದಿದ್ದರೆ, ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಚ ನೀಡಲಾಗುತ್ತಿದೆ ಎಂಬುವುದನ್ನು ನಿರೂಪಿಸಲು ನಮ್ಮ ಬಳಿ ದಾಖಲೆಗಳಿವೆ. ಆದರೆ ಸಂತೋಷ್ ಪಾಟೀಲ್ ನಿಧನದ ನಂತರ ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಪಡಿಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಈ ವಿವಾದದ ಬಿಂದುವಾಗಿದ್ದ ಸಚಿವರನ್ನೂ ಬಂಧಿಸಿರಲಿಲ್ಲ. ಇದು ಏನು ತೋರಿಸುತ್ತದೆ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ.

ಬಾಕಿ ಇರುವ ಬಿಲ್‌ಗಳನ್ನು ಕ್ಲಿಯರ್ ಮಾಡಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಗುತ್ತಿಗೆದಾದ ಸಂತೋಷ್ ಪಾಟೀಲ್ ಅವರು 2022ರ ಏಪ್ರಿಲ್‌ನಲ್ಲಿ ಉಡುಪಿಯ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಂಜುನಾಥ್ ಅವರು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಪತ್ರಿಕಾಗೋಷ್ಠಿಯಲ್ಲಿ ಪ್ಲೇ ಮಾಡಿದ್ದರು. ಈ ಸಂಭಾಷಣೆಯಲ್ಲಿ, ಮಂಜುನಾಥ್ ಅವರ ಧ್ವನಿಯು ಕೇಳಿಸುತ್ತದೆ,“(ಗುತ್ತಿಗೆ ಕಾಮಗಾರಿ) ಬಿಲ್ ಮಾಡಬೇಡಿ ಎಂದು ನೀವು ಹೇಗೆ ಹೇಳುತ್ತೀರಿ? ಅದು ತಪ್ಪಲ್ಲವೆ.(ಉಳಿದ ಲಂಚದ ಮೊತ್ತ) ನಾನು ನಿಮಗೆ ನೀಡುತ್ತೇನೆ… 5 ರಿಂದ 6 ಕೋಟಿ ರೂ. ಬಾಕಿ ಇವೆ. ನಾನು ಹೇಗೆ ಜೀವನ ನಡೆಸುವುದು?” ಎಂದು ಕೇಳಿದ್ದರು.

“ಶಾಸಕ ಲಂಚ ಕೇಳಿದ್ದಕ್ಕೆ ನನ್ನ ಬಳಿ ಆಡಿಯೋ ಕ್ಲಿಪ್‌ಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಮತ್ತು ಇತರ ದಾಖಲೆಗಳಿವೆ. ಹಾಗಾಗಿ ಇದನ್ನು ಮಾಧ್ಯಮಗಳ ಮುಂದೆ ಇಡಲು ಬಯಸಿದ್ದೇನೆ. ಇತರ ಗುತ್ತಿಗೆದಾರರಿಗೆ ಮಾದರಿಯಾಗಲು ಬೇಕಾಗಿ ನಾನು ಮುಂದೆ ನಿಂತಿದ್ದೇನೆ. 2019 ರಿಂದ ಹಿರಿಯ ಶಾಸಕರೊಬ್ಬರಿಗೆ ನಾನು ಹಣ ಕೊಡಬೇಕಾಗಿತ್ತು” ಎಂದು ಮಂಜುನಾಥ್ ತಿಳಿಸಿದ್ದಾರೆ.

“2019 ರಲ್ಲಿ ನಾನು PWD ಕಚೇರಿಯನ್ನು ನಿರ್ಮಿಸಿದೆ. ಆದರೆ ಅದರ ಬಿಲ್ ಇನ್ನೂ ಕ್ಲಿಯರ್ ಆಗಿಲ್ಲ. ನಾನು ಚಿತ್ರದುರ್ಗದಲ್ಲಿ ವಿಭಾಗ ಕಚೇರಿಯನ್ನು ನಿರ್ಮಿಸಿದ್ದೇನೆ, ಅದಕ್ಕೂ 5% ಕ್ಕಿಂತ ಹೆಚ್ಚು ಲಂಚ ನೀಡಬೇಕಾಗಿತ್ತು. ಮೊದಲ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ, ನಾನು 250 ಹಾಸಿಗೆಗಳ ಆಸ್ಪತ್ರೆಗಾಗಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ (MGS) ವ್ಯವಸ್ಥೆಯನ್ನು ನಿರ್ಮಿಸಿದೆ. ಇದು 12 ಕೋಟಿ ರೂಪಾಯಿ ಮೌಲ್ಯದ ಯೋಜನೆಯಾಗಿದ್ದು, ಇದಕ್ಕಾಗಿ ನಾನು 12.5 ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು” ಎಂದು ಅವರು ಹೇಳಿದ್ದಾರೆ.

ಸುಮಾರು 25,000 ಕೋಟಿ ಮೌಲ್ಯದ ಬಿಲ್‌ಗಳು ಸರ್ಕಾರದ ಬಳಿ ಬಾಕಿ ಇವೆ ಎಂದು ಸಂಘದ ಸದಸ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...