Homeಕರ್ನಾಟಕ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

- Advertisement -
- Advertisement -

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ)ವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಖ್ಯಾತ ಇಂಗ್ಲಿಷ್ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸದಿದ್ದರೆ, ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಚ ನೀಡಲಾಗುತ್ತಿದೆ ಎಂಬುವುದನ್ನು ನಿರೂಪಿಸಲು ನಮ್ಮ ಬಳಿ ದಾಖಲೆಗಳಿವೆ. ಆದರೆ ಸಂತೋಷ್ ಪಾಟೀಲ್ ನಿಧನದ ನಂತರ ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಪಡಿಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಈ ವಿವಾದದ ಬಿಂದುವಾಗಿದ್ದ ಸಚಿವರನ್ನೂ ಬಂಧಿಸಿರಲಿಲ್ಲ. ಇದು ಏನು ತೋರಿಸುತ್ತದೆ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ.

ಬಾಕಿ ಇರುವ ಬಿಲ್‌ಗಳನ್ನು ಕ್ಲಿಯರ್ ಮಾಡಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಗುತ್ತಿಗೆದಾದ ಸಂತೋಷ್ ಪಾಟೀಲ್ ಅವರು 2022ರ ಏಪ್ರಿಲ್‌ನಲ್ಲಿ ಉಡುಪಿಯ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಂಜುನಾಥ್ ಅವರು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಪತ್ರಿಕಾಗೋಷ್ಠಿಯಲ್ಲಿ ಪ್ಲೇ ಮಾಡಿದ್ದರು. ಈ ಸಂಭಾಷಣೆಯಲ್ಲಿ, ಮಂಜುನಾಥ್ ಅವರ ಧ್ವನಿಯು ಕೇಳಿಸುತ್ತದೆ,“(ಗುತ್ತಿಗೆ ಕಾಮಗಾರಿ) ಬಿಲ್ ಮಾಡಬೇಡಿ ಎಂದು ನೀವು ಹೇಗೆ ಹೇಳುತ್ತೀರಿ? ಅದು ತಪ್ಪಲ್ಲವೆ.(ಉಳಿದ ಲಂಚದ ಮೊತ್ತ) ನಾನು ನಿಮಗೆ ನೀಡುತ್ತೇನೆ… 5 ರಿಂದ 6 ಕೋಟಿ ರೂ. ಬಾಕಿ ಇವೆ. ನಾನು ಹೇಗೆ ಜೀವನ ನಡೆಸುವುದು?” ಎಂದು ಕೇಳಿದ್ದರು.

“ಶಾಸಕ ಲಂಚ ಕೇಳಿದ್ದಕ್ಕೆ ನನ್ನ ಬಳಿ ಆಡಿಯೋ ಕ್ಲಿಪ್‌ಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಮತ್ತು ಇತರ ದಾಖಲೆಗಳಿವೆ. ಹಾಗಾಗಿ ಇದನ್ನು ಮಾಧ್ಯಮಗಳ ಮುಂದೆ ಇಡಲು ಬಯಸಿದ್ದೇನೆ. ಇತರ ಗುತ್ತಿಗೆದಾರರಿಗೆ ಮಾದರಿಯಾಗಲು ಬೇಕಾಗಿ ನಾನು ಮುಂದೆ ನಿಂತಿದ್ದೇನೆ. 2019 ರಿಂದ ಹಿರಿಯ ಶಾಸಕರೊಬ್ಬರಿಗೆ ನಾನು ಹಣ ಕೊಡಬೇಕಾಗಿತ್ತು” ಎಂದು ಮಂಜುನಾಥ್ ತಿಳಿಸಿದ್ದಾರೆ.

“2019 ರಲ್ಲಿ ನಾನು PWD ಕಚೇರಿಯನ್ನು ನಿರ್ಮಿಸಿದೆ. ಆದರೆ ಅದರ ಬಿಲ್ ಇನ್ನೂ ಕ್ಲಿಯರ್ ಆಗಿಲ್ಲ. ನಾನು ಚಿತ್ರದುರ್ಗದಲ್ಲಿ ವಿಭಾಗ ಕಚೇರಿಯನ್ನು ನಿರ್ಮಿಸಿದ್ದೇನೆ, ಅದಕ್ಕೂ 5% ಕ್ಕಿಂತ ಹೆಚ್ಚು ಲಂಚ ನೀಡಬೇಕಾಗಿತ್ತು. ಮೊದಲ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ, ನಾನು 250 ಹಾಸಿಗೆಗಳ ಆಸ್ಪತ್ರೆಗಾಗಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ (MGS) ವ್ಯವಸ್ಥೆಯನ್ನು ನಿರ್ಮಿಸಿದೆ. ಇದು 12 ಕೋಟಿ ರೂಪಾಯಿ ಮೌಲ್ಯದ ಯೋಜನೆಯಾಗಿದ್ದು, ಇದಕ್ಕಾಗಿ ನಾನು 12.5 ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು” ಎಂದು ಅವರು ಹೇಳಿದ್ದಾರೆ.

ಸುಮಾರು 25,000 ಕೋಟಿ ಮೌಲ್ಯದ ಬಿಲ್‌ಗಳು ಸರ್ಕಾರದ ಬಳಿ ಬಾಕಿ ಇವೆ ಎಂದು ಸಂಘದ ಸದಸ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...